ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…