ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…