MIRROR FOCUS

ವಾಯುಭಾರ ಕುಸಿತ…. ಮತ್ತೆ ಮಳೆಯ ಆತಂಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ….‌ಮಳೆ….. ಮಳೆ….. ಈಗ ಇದಿಷ್ಟೇ.  ಈಗ ಗುಜರಾತ್ ಪ್ರದೇಶದಲ್ಲಿ ವಾಯುಭಾರ ಕುಸಿತದ ಲಕ್ಷಣ ಕಾಣುತ್ತಿದೆ.‌ಹೀಗಾಗಿ ಮತ್ತೆ 2 ದಿನ ಮಳೆ ಕಾಡಲಿದೆ. ಹೀಗಾಗಿ ಏನೇನಾಗುತ್ತೋ  ಏನೋ ಆತಂಕ ಜನರದ್ದು. ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮುಂಜಾಗ್ರತಾ ಕ್ರಮದಲ್ಲಿ ನಮ್ಮ ಪಾಲೂ ಇದೆ.

Advertisement

ಒಂದು ವಾರದಿಂದ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.‌ಈ ಬಾರಿ ಅತೀ ಹೆಚ್ಚು ಎಂಬಂತೆ 170 ಮಿ ಮೀ ಗಿಂತಲೂ ಹೆಚ್ಚು ಮಳೆಯಾಗಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರಾ ನದಿ ತುಂಬಿ ಹರಿದಿದೆ. ‌

ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ಸಂಗಮವಾಗಿ ಅಪಾಯಮಟ್ಟ ಮೀರಿ ಹರಿದಿದೆ. ರಾತ್ರೋ ರಾತ್ರಿ‌ ಜನರ ಸ್ಥಳಾಂತರ ಕಾರ್ಯವೂ ನಡೆದಿದೆ. ಬೆಳಗ್ಗೆ ಕೊಂಚ ನೀರಿನ‌ ಮಟ್ಟ ಇಳಿಕೆಯಾಗಿದೆ.

Advertisement

Advertisement

ಈಗ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿದೆ. ಗುಜರಾತ್ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ‌ ಕರಾವಳಿ ತೀರದಲ್ಲಿ ಮಳೆ ಹೆಚ್ಚಾಗಲಿದೆ.ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ‌‌ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್  ಎತ್ತರದಲ್ಲಿದೆ.‌ ಮೀನುಗಾರರು ಸಮುದ್ರಕ್ಕೆ‌ ಇಳಿಯದಂತೆ ಸೂಚಿಸಲಾಗಿದೆ.

ನೇತ್ರಾವತಿ, ಕುಮಾರಧಾರಾ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು  ಸುಬ್ರಹ್ಮಣ್ಯ, ಮಂಗಳೂರಿನಲ್ಲಿ‌ ಸನ್ನದ್ಧ  ಸ್ಥಿತಿಯಲ್ಲಿ ಇದೆ.

ಈಗಿನ ಮಳೆಯ ಬಗ್ಗೆ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಹೀಗೆ ಬರೆಯುತ್ತಾರೆ,

ಪುರಿ ಪತುದು, ಕರಿ ಪತುದು ಮಾತಾ ನಾಶೊ।
ಬರ್ಸೊದ ರಭಸೊಗು ಗಿಡಕಂಟಿ ಸರ್ತ ಒರಿಯಂದ್ ।।
ಪುಷ್ಯದ ಬರ್ಸೊಗು ಕಂಡುತಿನ್ಪಿನ ಪುಚ್ಚೆಗ್ಲಾ ನುಪ್ಪು ತಿಕ್ಕಂದುಗೆ ।
ನನ ಬೆಂದು ತಿನ್ಪಿನ ನರಮಾನಿಗ್ ತಿಕ್ಕುವಾ ।।

ಮಳೆ  ತನ್ನ ಹೆಸರಿನೊಂದಿಗೆ ತಳುಕು ಹಾಕಿಕೊಂಡಿರುವ ತುಳುನಾಡ ಹಿರಿಯರ ಈ ಮಾತು ತನಗೆ ಬೇಡವೆನ್ನುತ್ತಿದ್ದಾನೆ ಕಳೆದ ಐದು ವರ್ಷಗಳಿಂದ ಪುಷ್ಯ ! ಈಗ ತನಗಿರಲಿ ಎನ್ನುತ್ತಿದ್ದಾನೆ..!!

Advertisement

ಬಾಳಿಲದಲ್ಲಿ 149 ಮಿ.ಮೀ.ಮಳೆ ( ಕಳೆದ ವರ್ಷ 33 ಮಿ.ಮೀ)

ಚಿತ್ರ ಕೃಪೆ : ವಸಂತ ನಾಯಕ್,‌ಉಪ್ಪಿನಂಗಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago