Advertisement
MIRROR FOCUS

ವಾಯುಭಾರ ಕುಸಿತ…. ಮತ್ತೆ ಮಳೆಯ ಆತಂಕ

Share

ಮಳೆ….‌ಮಳೆ….. ಮಳೆ….. ಈಗ ಇದಿಷ್ಟೇ.  ಈಗ ಗುಜರಾತ್ ಪ್ರದೇಶದಲ್ಲಿ ವಾಯುಭಾರ ಕುಸಿತದ ಲಕ್ಷಣ ಕಾಣುತ್ತಿದೆ.‌ಹೀಗಾಗಿ ಮತ್ತೆ 2 ದಿನ ಮಳೆ ಕಾಡಲಿದೆ. ಹೀಗಾಗಿ ಏನೇನಾಗುತ್ತೋ  ಏನೋ ಆತಂಕ ಜನರದ್ದು. ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮುಂಜಾಗ್ರತಾ ಕ್ರಮದಲ್ಲಿ ನಮ್ಮ ಪಾಲೂ ಇದೆ.


ಒಂದು ವಾರದಿಂದ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.‌ಈ ಬಾರಿ ಅತೀ ಹೆಚ್ಚು ಎಂಬಂತೆ 170 ಮಿ ಮೀ ಗಿಂತಲೂ ಹೆಚ್ಚು ಮಳೆಯಾಗಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರಾ ನದಿ ತುಂಬಿ ಹರಿದಿದೆ. ‌

ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ಸಂಗಮವಾಗಿ ಅಪಾಯಮಟ್ಟ ಮೀರಿ ಹರಿದಿದೆ. ರಾತ್ರೋ ರಾತ್ರಿ‌ ಜನರ ಸ್ಥಳಾಂತರ ಕಾರ್ಯವೂ ನಡೆದಿದೆ. ಬೆಳಗ್ಗೆ ಕೊಂಚ ನೀರಿನ‌ ಮಟ್ಟ ಇಳಿಕೆಯಾಗಿದೆ.

ಈಗ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿದೆ. ಗುಜರಾತ್ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ‌ ಕರಾವಳಿ ತೀರದಲ್ಲಿ ಮಳೆ ಹೆಚ್ಚಾಗಲಿದೆ.ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ‌‌ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್  ಎತ್ತರದಲ್ಲಿದೆ.‌ ಮೀನುಗಾರರು ಸಮುದ್ರಕ್ಕೆ‌ ಇಳಿಯದಂತೆ ಸೂಚಿಸಲಾಗಿದೆ.

ನೇತ್ರಾವತಿ, ಕುಮಾರಧಾರಾ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು  ಸುಬ್ರಹ್ಮಣ್ಯ, ಮಂಗಳೂರಿನಲ್ಲಿ‌ ಸನ್ನದ್ಧ  ಸ್ಥಿತಿಯಲ್ಲಿ ಇದೆ.

ಈಗಿನ ಮಳೆಯ ಬಗ್ಗೆ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಹೀಗೆ ಬರೆಯುತ್ತಾರೆ,

ಪುರಿ ಪತುದು, ಕರಿ ಪತುದು ಮಾತಾ ನಾಶೊ।
ಬರ್ಸೊದ ರಭಸೊಗು ಗಿಡಕಂಟಿ ಸರ್ತ ಒರಿಯಂದ್ ।।
ಪುಷ್ಯದ ಬರ್ಸೊಗು ಕಂಡುತಿನ್ಪಿನ ಪುಚ್ಚೆಗ್ಲಾ ನುಪ್ಪು ತಿಕ್ಕಂದುಗೆ ।
ನನ ಬೆಂದು ತಿನ್ಪಿನ ನರಮಾನಿಗ್ ತಿಕ್ಕುವಾ ।।

ಮಳೆ  ತನ್ನ ಹೆಸರಿನೊಂದಿಗೆ ತಳುಕು ಹಾಕಿಕೊಂಡಿರುವ ತುಳುನಾಡ ಹಿರಿಯರ ಈ ಮಾತು ತನಗೆ ಬೇಡವೆನ್ನುತ್ತಿದ್ದಾನೆ ಕಳೆದ ಐದು ವರ್ಷಗಳಿಂದ ಪುಷ್ಯ ! ಈಗ ತನಗಿರಲಿ ಎನ್ನುತ್ತಿದ್ದಾನೆ..!!

ಬಾಳಿಲದಲ್ಲಿ 149 ಮಿ.ಮೀ.ಮಳೆ ( ಕಳೆದ ವರ್ಷ 33 ಮಿ.ಮೀ)

ಚಿತ್ರ ಕೃಪೆ : ವಸಂತ ನಾಯಕ್,‌ಉಪ್ಪಿನಂಗಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

22 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago