ಚಿತ್ರ ಕೃಪೆ : ವಸಂತ ನಾಯಕ್,ಉಪ್ಪಿನಂಗಡಿ
ಮಳೆ….ಮಳೆ….. ಮಳೆ….. ಈಗ ಇದಿಷ್ಟೇ. ಈಗ ಗುಜರಾತ್ ಪ್ರದೇಶದಲ್ಲಿ ವಾಯುಭಾರ ಕುಸಿತದ ಲಕ್ಷಣ ಕಾಣುತ್ತಿದೆ.ಹೀಗಾಗಿ ಮತ್ತೆ 2 ದಿನ ಮಳೆ ಕಾಡಲಿದೆ. ಹೀಗಾಗಿ ಏನೇನಾಗುತ್ತೋ ಏನೋ ಆತಂಕ ಜನರದ್ದು. ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮುಂಜಾಗ್ರತಾ ಕ್ರಮದಲ್ಲಿ ನಮ್ಮ ಪಾಲೂ ಇದೆ.
ಒಂದು ವಾರದಿಂದ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.ಈ ಬಾರಿ ಅತೀ ಹೆಚ್ಚು ಎಂಬಂತೆ 170 ಮಿ ಮೀ ಗಿಂತಲೂ ಹೆಚ್ಚು ಮಳೆಯಾಗಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರಾ ನದಿ ತುಂಬಿ ಹರಿದಿದೆ.
ಈಗ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿದೆ. ಗುಜರಾತ್ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ತೀರದಲ್ಲಿ ಮಳೆ ಹೆಚ್ಚಾಗಲಿದೆ.ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್ ಎತ್ತರದಲ್ಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರಾವತಿ, ಕುಮಾರಧಾರಾ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು ಸುಬ್ರಹ್ಮಣ್ಯ, ಮಂಗಳೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇದೆ.
ಈಗಿನ ಮಳೆಯ ಬಗ್ಗೆ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಹೀಗೆ ಬರೆಯುತ್ತಾರೆ,
ಪುರಿ ಪತುದು, ಕರಿ ಪತುದು ಮಾತಾ ನಾಶೊ।
ಬರ್ಸೊದ ರಭಸೊಗು ಗಿಡಕಂಟಿ ಸರ್ತ ಒರಿಯಂದ್ ।।
ಪುಷ್ಯದ ಬರ್ಸೊಗು ಕಂಡುತಿನ್ಪಿನ ಪುಚ್ಚೆಗ್ಲಾ ನುಪ್ಪು ತಿಕ್ಕಂದುಗೆ ।
ನನ ಬೆಂದು ತಿನ್ಪಿನ ನರಮಾನಿಗ್ ತಿಕ್ಕುವಾ ।।
ಮಳೆ ತನ್ನ ಹೆಸರಿನೊಂದಿಗೆ ತಳುಕು ಹಾಕಿಕೊಂಡಿರುವ ತುಳುನಾಡ ಹಿರಿಯರ ಈ ಮಾತು ತನಗೆ ಬೇಡವೆನ್ನುತ್ತಿದ್ದಾನೆ ಕಳೆದ ಐದು ವರ್ಷಗಳಿಂದ ಪುಷ್ಯ ! ಈಗ ತನಗಿರಲಿ ಎನ್ನುತ್ತಿದ್ದಾನೆ..!!
ಬಾಳಿಲದಲ್ಲಿ 149 ಮಿ.ಮೀ.ಮಳೆ ( ಕಳೆದ ವರ್ಷ 33 ಮಿ.ಮೀ)
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…