Advertisement
MIRROR FOCUS

ವಾಯುಭಾರ ಕುಸಿತ…. ಮತ್ತೆ ಮಳೆಯ ಆತಂಕ

Share

ಮಳೆ….‌ಮಳೆ….. ಮಳೆ….. ಈಗ ಇದಿಷ್ಟೇ.  ಈಗ ಗುಜರಾತ್ ಪ್ರದೇಶದಲ್ಲಿ ವಾಯುಭಾರ ಕುಸಿತದ ಲಕ್ಷಣ ಕಾಣುತ್ತಿದೆ.‌ಹೀಗಾಗಿ ಮತ್ತೆ 2 ದಿನ ಮಳೆ ಕಾಡಲಿದೆ. ಹೀಗಾಗಿ ಏನೇನಾಗುತ್ತೋ  ಏನೋ ಆತಂಕ ಜನರದ್ದು. ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮುಂಜಾಗ್ರತಾ ಕ್ರಮದಲ್ಲಿ ನಮ್ಮ ಪಾಲೂ ಇದೆ.


ಒಂದು ವಾರದಿಂದ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ.‌ಈ ಬಾರಿ ಅತೀ ಹೆಚ್ಚು ಎಂಬಂತೆ 170 ಮಿ ಮೀ ಗಿಂತಲೂ ಹೆಚ್ಚು ಮಳೆಯಾಗಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರಾ ನದಿ ತುಂಬಿ ಹರಿದಿದೆ. ‌

Advertisement

ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ಸಂಗಮವಾಗಿ ಅಪಾಯಮಟ್ಟ ಮೀರಿ ಹರಿದಿದೆ. ರಾತ್ರೋ ರಾತ್ರಿ‌ ಜನರ ಸ್ಥಳಾಂತರ ಕಾರ್ಯವೂ ನಡೆದಿದೆ. ಬೆಳಗ್ಗೆ ಕೊಂಚ ನೀರಿನ‌ ಮಟ್ಟ ಇಳಿಕೆಯಾಗಿದೆ.

Advertisement

ಈಗ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿದೆ. ಗುಜರಾತ್ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ‌ ಕರಾವಳಿ ತೀರದಲ್ಲಿ ಮಳೆ ಹೆಚ್ಚಾಗಲಿದೆ.ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ‌‌ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್  ಎತ್ತರದಲ್ಲಿದೆ.‌ ಮೀನುಗಾರರು ಸಮುದ್ರಕ್ಕೆ‌ ಇಳಿಯದಂತೆ ಸೂಚಿಸಲಾಗಿದೆ.

Advertisement

ನೇತ್ರಾವತಿ, ಕುಮಾರಧಾರಾ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು  ಸುಬ್ರಹ್ಮಣ್ಯ, ಮಂಗಳೂರಿನಲ್ಲಿ‌ ಸನ್ನದ್ಧ  ಸ್ಥಿತಿಯಲ್ಲಿ ಇದೆ.

ಈಗಿನ ಮಳೆಯ ಬಗ್ಗೆ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಹೀಗೆ ಬರೆಯುತ್ತಾರೆ,

Advertisement

ಪುರಿ ಪತುದು, ಕರಿ ಪತುದು ಮಾತಾ ನಾಶೊ।
ಬರ್ಸೊದ ರಭಸೊಗು ಗಿಡಕಂಟಿ ಸರ್ತ ಒರಿಯಂದ್ ।।
ಪುಷ್ಯದ ಬರ್ಸೊಗು ಕಂಡುತಿನ್ಪಿನ ಪುಚ್ಚೆಗ್ಲಾ ನುಪ್ಪು ತಿಕ್ಕಂದುಗೆ ।
ನನ ಬೆಂದು ತಿನ್ಪಿನ ನರಮಾನಿಗ್ ತಿಕ್ಕುವಾ ।।

ಮಳೆ  ತನ್ನ ಹೆಸರಿನೊಂದಿಗೆ ತಳುಕು ಹಾಕಿಕೊಂಡಿರುವ ತುಳುನಾಡ ಹಿರಿಯರ ಈ ಮಾತು ತನಗೆ ಬೇಡವೆನ್ನುತ್ತಿದ್ದಾನೆ ಕಳೆದ ಐದು ವರ್ಷಗಳಿಂದ ಪುಷ್ಯ ! ಈಗ ತನಗಿರಲಿ ಎನ್ನುತ್ತಿದ್ದಾನೆ..!!

Advertisement

ಬಾಳಿಲದಲ್ಲಿ 149 ಮಿ.ಮೀ.ಮಳೆ ( ಕಳೆದ ವರ್ಷ 33 ಮಿ.ಮೀ)

ಚಿತ್ರ ಕೃಪೆ : ವಸಂತ ನಾಯಕ್,‌ಉಪ್ಪಿನಂಗಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

13 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

16 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

16 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

24 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago