“ವಾಯು” ಚಂಡಮಾರುತ ಗುಜರಾತ್ ಕಡೆಗೆ : ಕರಾವಳಿ ತೀರದ ಜನರ ಸ್ಥಳಾಂತರ

June 11, 2019
9:20 PM

ಗುಜರಾತ್ :  ವಾಯು ಚಂಡಮಾರುತ ತನ್ನ ಪ್ರಭಾವ ಹೆಚ್ಚಿಸಿದೆ. ಜೂ.12  ಬುಧವಾರ ರಾತ್ರಿಯ ಒಳಗೆ  130-140 ಕಿ.ಮೀ. ವೇಗದಲ್ಲಿ ಗುಜರಾತ್‌ ಕರಾವಳಿ ಭಾಗವನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತವು ಉತ್ತರದ ಕಡೆ ಬೀಸಲಿದ್ದು  ಗುಜರಾತ್ ಮೀನುಗಾರರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು ಕರಾವಳಿ ತೀರದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಈ ನಡುವೆ ಗೃಹಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ, ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ, ಹವಾಮಾನ ಉಲಾಖೆ ಮತ್ತು ಗೃಹ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳ ಸಭೆಯೂ ಇಂದು ನಡೆದಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.

Advertisement
Advertisement
Advertisement

ಮಂಗಳವಾರ ಸಂಜೆ  ವೇಳೆಗೆ ‘ವಾಯು’ ಚಂಡಮಾರುತ ಗೋವಾದಿಂದ 350 ಕಿ.ಮೀ ನೈರುತ್ಯಕ್ಕೆ ಹಾಗೂ ಮುಂಬಯಿನಿಂದ 510 ಕಿ.ಮೀ ಮತ್ತು ವೆರಾವಲ್‌ನಿಂದ 650 ಕಿ.ಮೀ ದಕ್ಷಿಣ-ನೈರುತ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಅದು ಉತ್ತರದ ಕಡೆಗೆ ಮುಂದುವರಿಯುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಶಕ್ತಿ ವೃದ್ಧಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement

ಚಂಡಮಾರುತದ ಕಾರಣದಿಂದ ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಕರ್ನಾಟಕ, ಗೋವಾ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕೇರಳದಲ್ಲಿಯೂ ವಾಯು ಚಂಡಮಾರುತದಿಂದ ಮುಂಗಾರು ವಿಳಂಬವಾಗಿದೆ. ಕೇರಳದಲ್ಲೂ ಯಾವುದೇ ಅನಾಹುತ ಸಂಭವಿಸಿದಂತೆ ಈಗಾಗಲೇ  ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ  ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಚೆನ್ನೈ  ಪ್ರದೇಶದಲ್ಲೂ  ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಪ್ರಭಾವ ಹೆಚ್ಚಿಸಿದೆ.

ಹವಾಮಾನ ಇಲಾಖೆಯ ಸೂಚನೆ ಮೇರೆಗೆ ತಕ್ಷಣ ಎಲರ್ಟ್ ಆಗಿರುವ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ 26 ತಂಡಗಳನ್ನು ಸಜ್ಜುಗೊಳಿಸಿದೆ. ದೋಣಿಗಳು, ಮರ ಕತ್ತರಿಸುವ ಉಪಕರಣಗಳು, ದೂರ ಸಂಪರ್ಕ ಸಲಕರಣೆಗಳು- ಎಲ್ಲವನ್ನೂ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಲ್ಲದೆ ಇನ್ನೂ 10 ಹೆಚ್ಚುವರಿ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದೆ.  ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಬೇಕು ಎಂದು ಎಲ್ಲಾ ಇಲಾಖೆಗಳಿಗೆ, ವಿಭಾಗಗಳಿಗೆ ಸೂಚನೆ ನೀಡಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ | ಮುಂದಿನ ಆದೇಶದವರೆಗೆ ಈರುಳ್ಳಿ ರಪ್ತು ನಿಷೇಧ ವಿಸ್ತರಣೆ
March 23, 2024
11:30 PM
by: The Rural Mirror ಸುದ್ದಿಜಾಲ
‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?
March 21, 2024
10:43 AM
by: The Rural Mirror ಸುದ್ದಿಜಾಲ
ಟ್ರೋಫಿ ಗೆದ್ದ RCB ಮಹಿಳಾ ತಂಡಕ್ಕೆ ಕೋಟಿ ಕೋಟಿ ಬಹುಮಾನ | ಆರ್‌ಸಿಬಿ ಮಹಿಳಾ ಮಣಿಗಳು ದೋಚಿದ ಬಹುಮಾನದ ಮೊತ್ತ ಎಷ್ಟು?
March 19, 2024
11:00 AM
by: The Rural Mirror ಸುದ್ದಿಜಾಲ
ರಾಜಧಾನಿ ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಪಟ್ಟ | ಪಾಕಿಸ್ತಾನ ನಂತರ ಅತ್ಯಂತ ವಿಷಕಾರಿ ಗಾಳಿ ಹೊಂದಿರುವ ದೇಶ ಭಾರತ..!
March 19, 2024
10:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror