Advertisement
ರಾಷ್ಟ್ರೀಯ

“ವಾಯು” ಚಂಡಮಾರುತ ಗುಜರಾತ್ ಕಡೆಗೆ : ಕರಾವಳಿ ತೀರದ ಜನರ ಸ್ಥಳಾಂತರ

Share

ಗುಜರಾತ್ :  ವಾಯು ಚಂಡಮಾರುತ ತನ್ನ ಪ್ರಭಾವ ಹೆಚ್ಚಿಸಿದೆ. ಜೂ.12  ಬುಧವಾರ ರಾತ್ರಿಯ ಒಳಗೆ  130-140 ಕಿ.ಮೀ. ವೇಗದಲ್ಲಿ ಗುಜರಾತ್‌ ಕರಾವಳಿ ಭಾಗವನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತವು ಉತ್ತರದ ಕಡೆ ಬೀಸಲಿದ್ದು  ಗುಜರಾತ್ ಮೀನುಗಾರರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು ಕರಾವಳಿ ತೀರದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಈ ನಡುವೆ ಗೃಹಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ, ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ, ಹವಾಮಾನ ಉಲಾಖೆ ಮತ್ತು ಗೃಹ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳ ಸಭೆಯೂ ಇಂದು ನಡೆದಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.

ಮಂಗಳವಾರ ಸಂಜೆ  ವೇಳೆಗೆ ‘ವಾಯು’ ಚಂಡಮಾರುತ ಗೋವಾದಿಂದ 350 ಕಿ.ಮೀ ನೈರುತ್ಯಕ್ಕೆ ಹಾಗೂ ಮುಂಬಯಿನಿಂದ 510 ಕಿ.ಮೀ ಮತ್ತು ವೆರಾವಲ್‌ನಿಂದ 650 ಕಿ.ಮೀ ದಕ್ಷಿಣ-ನೈರುತ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಅದು ಉತ್ತರದ ಕಡೆಗೆ ಮುಂದುವರಿಯುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಶಕ್ತಿ ವೃದ್ಧಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತದ ಕಾರಣದಿಂದ ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಕರ್ನಾಟಕ, ಗೋವಾ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕೇರಳದಲ್ಲಿಯೂ ವಾಯು ಚಂಡಮಾರುತದಿಂದ ಮುಂಗಾರು ವಿಳಂಬವಾಗಿದೆ. ಕೇರಳದಲ್ಲೂ ಯಾವುದೇ ಅನಾಹುತ ಸಂಭವಿಸಿದಂತೆ ಈಗಾಗಲೇ  ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ  ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಚೆನ್ನೈ  ಪ್ರದೇಶದಲ್ಲೂ  ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಪ್ರಭಾವ ಹೆಚ್ಚಿಸಿದೆ.

ಹವಾಮಾನ ಇಲಾಖೆಯ ಸೂಚನೆ ಮೇರೆಗೆ ತಕ್ಷಣ ಎಲರ್ಟ್ ಆಗಿರುವ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ 26 ತಂಡಗಳನ್ನು ಸಜ್ಜುಗೊಳಿಸಿದೆ. ದೋಣಿಗಳು, ಮರ ಕತ್ತರಿಸುವ ಉಪಕರಣಗಳು, ದೂರ ಸಂಪರ್ಕ ಸಲಕರಣೆಗಳು- ಎಲ್ಲವನ್ನೂ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಲ್ಲದೆ ಇನ್ನೂ 10 ಹೆಚ್ಚುವರಿ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದೆ.  ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಬೇಕು ಎಂದು ಎಲ್ಲಾ ಇಲಾಖೆಗಳಿಗೆ, ವಿಭಾಗಗಳಿಗೆ ಸೂಚನೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

5 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

5 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

12 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

18 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

19 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

1 day ago