Advertisement
ರಾಷ್ಟ್ರೀಯ

“ವಾಯು” ಚಂಡಮಾರುತ ಗುಜರಾತ್ ಕಡೆಗೆ : ಕರಾವಳಿ ತೀರದ ಜನರ ಸ್ಥಳಾಂತರ

Share

ಗುಜರಾತ್ :  ವಾಯು ಚಂಡಮಾರುತ ತನ್ನ ಪ್ರಭಾವ ಹೆಚ್ಚಿಸಿದೆ. ಜೂ.12  ಬುಧವಾರ ರಾತ್ರಿಯ ಒಳಗೆ  130-140 ಕಿ.ಮೀ. ವೇಗದಲ್ಲಿ ಗುಜರಾತ್‌ ಕರಾವಳಿ ಭಾಗವನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತವು ಉತ್ತರದ ಕಡೆ ಬೀಸಲಿದ್ದು  ಗುಜರಾತ್ ಮೀನುಗಾರರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು ಕರಾವಳಿ ತೀರದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಈ ನಡುವೆ ಗೃಹಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ, ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ, ಹವಾಮಾನ ಉಲಾಖೆ ಮತ್ತು ಗೃಹ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳ ಸಭೆಯೂ ಇಂದು ನಡೆದಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.

ಮಂಗಳವಾರ ಸಂಜೆ  ವೇಳೆಗೆ ‘ವಾಯು’ ಚಂಡಮಾರುತ ಗೋವಾದಿಂದ 350 ಕಿ.ಮೀ ನೈರುತ್ಯಕ್ಕೆ ಹಾಗೂ ಮುಂಬಯಿನಿಂದ 510 ಕಿ.ಮೀ ಮತ್ತು ವೆರಾವಲ್‌ನಿಂದ 650 ಕಿ.ಮೀ ದಕ್ಷಿಣ-ನೈರುತ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಅದು ಉತ್ತರದ ಕಡೆಗೆ ಮುಂದುವರಿಯುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಶಕ್ತಿ ವೃದ್ಧಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತದ ಕಾರಣದಿಂದ ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಕರ್ನಾಟಕ, ಗೋವಾ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕೇರಳದಲ್ಲಿಯೂ ವಾಯು ಚಂಡಮಾರುತದಿಂದ ಮುಂಗಾರು ವಿಳಂಬವಾಗಿದೆ. ಕೇರಳದಲ್ಲೂ ಯಾವುದೇ ಅನಾಹುತ ಸಂಭವಿಸಿದಂತೆ ಈಗಾಗಲೇ  ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ  ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಚೆನ್ನೈ  ಪ್ರದೇಶದಲ್ಲೂ  ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಪ್ರಭಾವ ಹೆಚ್ಚಿಸಿದೆ.

ಹವಾಮಾನ ಇಲಾಖೆಯ ಸೂಚನೆ ಮೇರೆಗೆ ತಕ್ಷಣ ಎಲರ್ಟ್ ಆಗಿರುವ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ 26 ತಂಡಗಳನ್ನು ಸಜ್ಜುಗೊಳಿಸಿದೆ. ದೋಣಿಗಳು, ಮರ ಕತ್ತರಿಸುವ ಉಪಕರಣಗಳು, ದೂರ ಸಂಪರ್ಕ ಸಲಕರಣೆಗಳು- ಎಲ್ಲವನ್ನೂ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಲ್ಲದೆ ಇನ್ನೂ 10 ಹೆಚ್ಚುವರಿ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದೆ.  ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಬೇಕು ಎಂದು ಎಲ್ಲಾ ಇಲಾಖೆಗಳಿಗೆ, ವಿಭಾಗಗಳಿಗೆ ಸೂಚನೆ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 hour ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

8 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

16 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

18 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

24 hours ago