ವಾರದಿಂದ ಸುಳ್ಯದಲ್ಲಿ ಕಸ ಸಂಗ್ರಹ ಸ್ಥಗಿತ……!

July 6, 2019
8:00 PM

ಸುಳ್ಯ: ನಗರದಲ್ಲಿ ಕಸ ಸಂಗ್ರಹ ಕಾರ್ಯ ಕಳೆದ ಕೆಲವು ದಿನಗಳಿಂದ ನಿಂತಿದೆ. ಹೀಗಾಗಿ ಸಾರ್ವಜನಿಕರು ಕಸ ವಿಲೇವಾರಿಗೆ ಏನು ಮಾಡುವುದು  ಎಂಬ ಚಿಂತೆಯಲ್ಲಿದ್ದಾರೆ. ವಾರದ ನಿರ್ದಿಷ್ಟ ದಿನಗಳಲ್ಲಿ ನಗರದ ಬೇರೆ ಭಾಗಗಳಿಗೆ ವಾಹನ ತೆರಳಿ ಕಸ ಸಂಗ್ರಹಿಸಲಾಗುತ್ತಿತ್ತು. ಇದೀಗ ಒಂದು ವಾರದಿಂದ ನಗರದಲ್ಲಿ ಕಸ ಸಂಗ್ರಹಕ್ಕೆ ಯಾವುದೇ ವಾಹನ ಬಂದಿಲ್ಲ  ಸಾರ್ವಜನಿಕರು ದೂರಿದ್ದಾರೆ.

Advertisement

ಸಾರ್ವಜನಿಕರು ನೀಡಿದ ಮಾಹಿತಿಯಂತೆ ನಗರದ ಕುರುಂಜಿಭಾಗ್‍ಗೆ ಐದು ದಿನಗಳಿಂದ ಕಸ ಸಂಗ್ರಹ ವಾಹನ ತೆರಳಿಲ್ಲ. ಇಲ್ಲಿ ಶೇಖರವಾಗುವ ಕಸಗಳು ಮನೆಗಳಲ್ಲಿ, ಅಂಗಡಿಗಳಲ್ಲಿ ಹಾಗೆಯೇ ಉಳಿದಿದೆ. ನಗರದ ಜಟ್ಟಿಪಳ್ಳ, ಕನಿಕರಪಳ್ಳ ಭಾಗಕ್ಕೆ ವಾರದಿಂದ ಕಸ ಸಂಗ್ರಹ ವಾಹನ ತೆರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನಾವೂರು ವಾರ್ಡ್‍ಗಳಿಗೆ ವಾರಕ್ಕೆ ಮೂರು ಬಾರಿ ಕಸ ಸಂಗ್ರಹ ವಾಹನ ತೆರಳಿ ಕಸ ಸಂಗ್ರಹ ಮಾಡುತ್ತಿದ್ದರೂ ಕಳೆದ ವಾರದಲ್ಲಿ ಒಮ್ಮೆಯೂ ತೆರಳಿಲ್ಲ. ಅದೇ ರೀತಿ ವಿವಿಧ ವಾರ್ಡ್‍ಗಳಲ್ಲಿಯೂ ಕಸ ಸಂಗ್ರಹ ಆಗದೆ ಸಮಸ್ಯೆ ತಲೆದೋರಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ನಡೆಯುತಿದೆ. ನಗರದಲ್ಲಿ ಕಸ ಸಂಗ್ರಹ ಮಾಡುವ ಕಾರ್ಮಿಕರು ನ.ಪಂ.ಕಟ್ಟಡದಲ್ಲಿ ಶೇಖರಗೊಂಡಿರುವ ಕಸವನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿರುವುದರಿಂದ ನಗರದ ಕಸ ಸಂಗ್ರಹಕ್ಕೆ ಹಿನ್ನಡೆಯಾಗಿದೆ ಎಂಬುದು ನಗರ ಪಂಚಾಯತ್ ಅಧಿಕಾರಿಗಳು ನೀಡುವ ಸ್ಪಷ್ಟನೆ. ಆದರೆ ನಗರ ಪಂಚಾಯತ್ ಬಳಿಯ ಕಸ ಸಾಗಾಟದ ನೆಪವೊಡ್ಡಿ ವಾರ್ಡ್‍ಗಳ ಮನೆಗಳಿಂದ ಕಸ ಸಂಗ್ರಹ ಸ್ಥಗಿತ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರ ಪಂಚಾಯತ್ ಕಟ್ಟಡ ಸಮೀಪದಲ್ಲಿ ಸಂಗ್ರಹ ವಾಗಿರುವ ಕಡೆ ವಿಲೇವಾರಿ ಮಾಡುವ ಕಾರಣ ಕೆಲವೆಡೆ ಕಸ ಸಂಗ್ರಹಕ್ಕೆ ತೊಡಕಾಗಿದೆ. ನಾಳೆಯಿಂದ ಎಂದಿನಂತೆ ಕಸ ಸಂಗ್ರಹ ಆರಂಭಿಸಲಾಗುವುದು ಎಂದು ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

Advertisement

ನಗರ ಸಮೀಪದ ಕಟ್ಟಡದಲ್ಲಿರುವ ಕಸವನ್ನು ಒಮ್ಮೆ ಪೂರ್ತಿಯಾಗಿ ವಿಲೇವಾರಿ ಮಾಡುವ ಕೆಲಸ ನಡೆಯುತಿದೆ. ಇದರಿಂದ ನಗರದ ಕೆಲವು ಭಾಗಗಳಲ್ಲಿ ಕಸ ಸಂಗ್ರಹ ಕಾರ್ಯಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಕಸ ಸಂಗ್ರಹ ವಾಹನಗಳು ನಾಳೆಯಿಂದ ವಾರ್ಡ್‍ಗಳಿಗೆ ಕಳುಹಿಸಲಾಗವುದು ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ತಿಳಿಸಿದ್ದಾರೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group