Advertisement
ವಿಶೇಷ ವರದಿಗಳು

ವಾರದಿಂದ ಸುಳ್ಯದಲ್ಲಿ ಕಸ ಸಂಗ್ರಹ ಸ್ಥಗಿತ……!

Share

ಸುಳ್ಯ: ನಗರದಲ್ಲಿ ಕಸ ಸಂಗ್ರಹ ಕಾರ್ಯ ಕಳೆದ ಕೆಲವು ದಿನಗಳಿಂದ ನಿಂತಿದೆ. ಹೀಗಾಗಿ ಸಾರ್ವಜನಿಕರು ಕಸ ವಿಲೇವಾರಿಗೆ ಏನು ಮಾಡುವುದು  ಎಂಬ ಚಿಂತೆಯಲ್ಲಿದ್ದಾರೆ. ವಾರದ ನಿರ್ದಿಷ್ಟ ದಿನಗಳಲ್ಲಿ ನಗರದ ಬೇರೆ ಭಾಗಗಳಿಗೆ ವಾಹನ ತೆರಳಿ ಕಸ ಸಂಗ್ರಹಿಸಲಾಗುತ್ತಿತ್ತು. ಇದೀಗ ಒಂದು ವಾರದಿಂದ ನಗರದಲ್ಲಿ ಕಸ ಸಂಗ್ರಹಕ್ಕೆ ಯಾವುದೇ ವಾಹನ ಬಂದಿಲ್ಲ  ಸಾರ್ವಜನಿಕರು ದೂರಿದ್ದಾರೆ.

ಸಾರ್ವಜನಿಕರು ನೀಡಿದ ಮಾಹಿತಿಯಂತೆ ನಗರದ ಕುರುಂಜಿಭಾಗ್‍ಗೆ ಐದು ದಿನಗಳಿಂದ ಕಸ ಸಂಗ್ರಹ ವಾಹನ ತೆರಳಿಲ್ಲ. ಇಲ್ಲಿ ಶೇಖರವಾಗುವ ಕಸಗಳು ಮನೆಗಳಲ್ಲಿ, ಅಂಗಡಿಗಳಲ್ಲಿ ಹಾಗೆಯೇ ಉಳಿದಿದೆ. ನಗರದ ಜಟ್ಟಿಪಳ್ಳ, ಕನಿಕರಪಳ್ಳ ಭಾಗಕ್ಕೆ ವಾರದಿಂದ ಕಸ ಸಂಗ್ರಹ ವಾಹನ ತೆರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನಾವೂರು ವಾರ್ಡ್‍ಗಳಿಗೆ ವಾರಕ್ಕೆ ಮೂರು ಬಾರಿ ಕಸ ಸಂಗ್ರಹ ವಾಹನ ತೆರಳಿ ಕಸ ಸಂಗ್ರಹ ಮಾಡುತ್ತಿದ್ದರೂ ಕಳೆದ ವಾರದಲ್ಲಿ ಒಮ್ಮೆಯೂ ತೆರಳಿಲ್ಲ. ಅದೇ ರೀತಿ ವಿವಿಧ ವಾರ್ಡ್‍ಗಳಲ್ಲಿಯೂ ಕಸ ಸಂಗ್ರಹ ಆಗದೆ ಸಮಸ್ಯೆ ತಲೆದೋರಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ನಡೆಯುತಿದೆ. ನಗರದಲ್ಲಿ ಕಸ ಸಂಗ್ರಹ ಮಾಡುವ ಕಾರ್ಮಿಕರು ನ.ಪಂ.ಕಟ್ಟಡದಲ್ಲಿ ಶೇಖರಗೊಂಡಿರುವ ಕಸವನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿರುವುದರಿಂದ ನಗರದ ಕಸ ಸಂಗ್ರಹಕ್ಕೆ ಹಿನ್ನಡೆಯಾಗಿದೆ ಎಂಬುದು ನಗರ ಪಂಚಾಯತ್ ಅಧಿಕಾರಿಗಳು ನೀಡುವ ಸ್ಪಷ್ಟನೆ. ಆದರೆ ನಗರ ಪಂಚಾಯತ್ ಬಳಿಯ ಕಸ ಸಾಗಾಟದ ನೆಪವೊಡ್ಡಿ ವಾರ್ಡ್‍ಗಳ ಮನೆಗಳಿಂದ ಕಸ ಸಂಗ್ರಹ ಸ್ಥಗಿತ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರ ಪಂಚಾಯತ್ ಕಟ್ಟಡ ಸಮೀಪದಲ್ಲಿ ಸಂಗ್ರಹ ವಾಗಿರುವ ಕಡೆ ವಿಲೇವಾರಿ ಮಾಡುವ ಕಾರಣ ಕೆಲವೆಡೆ ಕಸ ಸಂಗ್ರಹಕ್ಕೆ ತೊಡಕಾಗಿದೆ. ನಾಳೆಯಿಂದ ಎಂದಿನಂತೆ ಕಸ ಸಂಗ್ರಹ ಆರಂಭಿಸಲಾಗುವುದು ಎಂದು ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

ನಗರ ಸಮೀಪದ ಕಟ್ಟಡದಲ್ಲಿರುವ ಕಸವನ್ನು ಒಮ್ಮೆ ಪೂರ್ತಿಯಾಗಿ ವಿಲೇವಾರಿ ಮಾಡುವ ಕೆಲಸ ನಡೆಯುತಿದೆ. ಇದರಿಂದ ನಗರದ ಕೆಲವು ಭಾಗಗಳಲ್ಲಿ ಕಸ ಸಂಗ್ರಹ ಕಾರ್ಯಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಕಸ ಸಂಗ್ರಹ ವಾಹನಗಳು ನಾಳೆಯಿಂದ ವಾರ್ಡ್‍ಗಳಿಗೆ ಕಳುಹಿಸಲಾಗವುದು ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

16 minutes ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

19 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

23 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago