Advertisement
ವಿಶೇಷ ವರದಿಗಳು

ವಾರದಿಂದ ಸುಳ್ಯದಲ್ಲಿ ಕಸ ಸಂಗ್ರಹ ಸ್ಥಗಿತ……!

Share

ಸುಳ್ಯ: ನಗರದಲ್ಲಿ ಕಸ ಸಂಗ್ರಹ ಕಾರ್ಯ ಕಳೆದ ಕೆಲವು ದಿನಗಳಿಂದ ನಿಂತಿದೆ. ಹೀಗಾಗಿ ಸಾರ್ವಜನಿಕರು ಕಸ ವಿಲೇವಾರಿಗೆ ಏನು ಮಾಡುವುದು  ಎಂಬ ಚಿಂತೆಯಲ್ಲಿದ್ದಾರೆ. ವಾರದ ನಿರ್ದಿಷ್ಟ ದಿನಗಳಲ್ಲಿ ನಗರದ ಬೇರೆ ಭಾಗಗಳಿಗೆ ವಾಹನ ತೆರಳಿ ಕಸ ಸಂಗ್ರಹಿಸಲಾಗುತ್ತಿತ್ತು. ಇದೀಗ ಒಂದು ವಾರದಿಂದ ನಗರದಲ್ಲಿ ಕಸ ಸಂಗ್ರಹಕ್ಕೆ ಯಾವುದೇ ವಾಹನ ಬಂದಿಲ್ಲ  ಸಾರ್ವಜನಿಕರು ದೂರಿದ್ದಾರೆ.

ಸಾರ್ವಜನಿಕರು ನೀಡಿದ ಮಾಹಿತಿಯಂತೆ ನಗರದ ಕುರುಂಜಿಭಾಗ್‍ಗೆ ಐದು ದಿನಗಳಿಂದ ಕಸ ಸಂಗ್ರಹ ವಾಹನ ತೆರಳಿಲ್ಲ. ಇಲ್ಲಿ ಶೇಖರವಾಗುವ ಕಸಗಳು ಮನೆಗಳಲ್ಲಿ, ಅಂಗಡಿಗಳಲ್ಲಿ ಹಾಗೆಯೇ ಉಳಿದಿದೆ. ನಗರದ ಜಟ್ಟಿಪಳ್ಳ, ಕನಿಕರಪಳ್ಳ ಭಾಗಕ್ಕೆ ವಾರದಿಂದ ಕಸ ಸಂಗ್ರಹ ವಾಹನ ತೆರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನಾವೂರು ವಾರ್ಡ್‍ಗಳಿಗೆ ವಾರಕ್ಕೆ ಮೂರು ಬಾರಿ ಕಸ ಸಂಗ್ರಹ ವಾಹನ ತೆರಳಿ ಕಸ ಸಂಗ್ರಹ ಮಾಡುತ್ತಿದ್ದರೂ ಕಳೆದ ವಾರದಲ್ಲಿ ಒಮ್ಮೆಯೂ ತೆರಳಿಲ್ಲ. ಅದೇ ರೀತಿ ವಿವಿಧ ವಾರ್ಡ್‍ಗಳಲ್ಲಿಯೂ ಕಸ ಸಂಗ್ರಹ ಆಗದೆ ಸಮಸ್ಯೆ ತಲೆದೋರಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ನಡೆಯುತಿದೆ. ನಗರದಲ್ಲಿ ಕಸ ಸಂಗ್ರಹ ಮಾಡುವ ಕಾರ್ಮಿಕರು ನ.ಪಂ.ಕಟ್ಟಡದಲ್ಲಿ ಶೇಖರಗೊಂಡಿರುವ ಕಸವನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿರುವುದರಿಂದ ನಗರದ ಕಸ ಸಂಗ್ರಹಕ್ಕೆ ಹಿನ್ನಡೆಯಾಗಿದೆ ಎಂಬುದು ನಗರ ಪಂಚಾಯತ್ ಅಧಿಕಾರಿಗಳು ನೀಡುವ ಸ್ಪಷ್ಟನೆ. ಆದರೆ ನಗರ ಪಂಚಾಯತ್ ಬಳಿಯ ಕಸ ಸಾಗಾಟದ ನೆಪವೊಡ್ಡಿ ವಾರ್ಡ್‍ಗಳ ಮನೆಗಳಿಂದ ಕಸ ಸಂಗ್ರಹ ಸ್ಥಗಿತ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರ ಪಂಚಾಯತ್ ಕಟ್ಟಡ ಸಮೀಪದಲ್ಲಿ ಸಂಗ್ರಹ ವಾಗಿರುವ ಕಡೆ ವಿಲೇವಾರಿ ಮಾಡುವ ಕಾರಣ ಕೆಲವೆಡೆ ಕಸ ಸಂಗ್ರಹಕ್ಕೆ ತೊಡಕಾಗಿದೆ. ನಾಳೆಯಿಂದ ಎಂದಿನಂತೆ ಕಸ ಸಂಗ್ರಹ ಆರಂಭಿಸಲಾಗುವುದು ಎಂದು ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

ನಗರ ಸಮೀಪದ ಕಟ್ಟಡದಲ್ಲಿರುವ ಕಸವನ್ನು ಒಮ್ಮೆ ಪೂರ್ತಿಯಾಗಿ ವಿಲೇವಾರಿ ಮಾಡುವ ಕೆಲಸ ನಡೆಯುತಿದೆ. ಇದರಿಂದ ನಗರದ ಕೆಲವು ಭಾಗಗಳಲ್ಲಿ ಕಸ ಸಂಗ್ರಹ ಕಾರ್ಯಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಕಸ ಸಂಗ್ರಹ ವಾಹನಗಳು ನಾಳೆಯಿಂದ ವಾರ್ಡ್‍ಗಳಿಗೆ ಕಳುಹಿಸಲಾಗವುದು ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

15 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

15 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 days ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago