Advertisement
ವಿಶೇಷ ವರದಿಗಳು

ವಾರದಿಂದ ಸುಳ್ಯದಲ್ಲಿ ಕಸ ಸಂಗ್ರಹ ಸ್ಥಗಿತ……!

Share

ಸುಳ್ಯ: ನಗರದಲ್ಲಿ ಕಸ ಸಂಗ್ರಹ ಕಾರ್ಯ ಕಳೆದ ಕೆಲವು ದಿನಗಳಿಂದ ನಿಂತಿದೆ. ಹೀಗಾಗಿ ಸಾರ್ವಜನಿಕರು ಕಸ ವಿಲೇವಾರಿಗೆ ಏನು ಮಾಡುವುದು  ಎಂಬ ಚಿಂತೆಯಲ್ಲಿದ್ದಾರೆ. ವಾರದ ನಿರ್ದಿಷ್ಟ ದಿನಗಳಲ್ಲಿ ನಗರದ ಬೇರೆ ಭಾಗಗಳಿಗೆ ವಾಹನ ತೆರಳಿ ಕಸ ಸಂಗ್ರಹಿಸಲಾಗುತ್ತಿತ್ತು. ಇದೀಗ ಒಂದು ವಾರದಿಂದ ನಗರದಲ್ಲಿ ಕಸ ಸಂಗ್ರಹಕ್ಕೆ ಯಾವುದೇ ವಾಹನ ಬಂದಿಲ್ಲ  ಸಾರ್ವಜನಿಕರು ದೂರಿದ್ದಾರೆ.

ಸಾರ್ವಜನಿಕರು ನೀಡಿದ ಮಾಹಿತಿಯಂತೆ ನಗರದ ಕುರುಂಜಿಭಾಗ್‍ಗೆ ಐದು ದಿನಗಳಿಂದ ಕಸ ಸಂಗ್ರಹ ವಾಹನ ತೆರಳಿಲ್ಲ. ಇಲ್ಲಿ ಶೇಖರವಾಗುವ ಕಸಗಳು ಮನೆಗಳಲ್ಲಿ, ಅಂಗಡಿಗಳಲ್ಲಿ ಹಾಗೆಯೇ ಉಳಿದಿದೆ. ನಗರದ ಜಟ್ಟಿಪಳ್ಳ, ಕನಿಕರಪಳ್ಳ ಭಾಗಕ್ಕೆ ವಾರದಿಂದ ಕಸ ಸಂಗ್ರಹ ವಾಹನ ತೆರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ನಾವೂರು ವಾರ್ಡ್‍ಗಳಿಗೆ ವಾರಕ್ಕೆ ಮೂರು ಬಾರಿ ಕಸ ಸಂಗ್ರಹ ವಾಹನ ತೆರಳಿ ಕಸ ಸಂಗ್ರಹ ಮಾಡುತ್ತಿದ್ದರೂ ಕಳೆದ ವಾರದಲ್ಲಿ ಒಮ್ಮೆಯೂ ತೆರಳಿಲ್ಲ. ಅದೇ ರೀತಿ ವಿವಿಧ ವಾರ್ಡ್‍ಗಳಲ್ಲಿಯೂ ಕಸ ಸಂಗ್ರಹ ಆಗದೆ ಸಮಸ್ಯೆ ತಲೆದೋರಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ನಡೆಯುತಿದೆ. ನಗರದಲ್ಲಿ ಕಸ ಸಂಗ್ರಹ ಮಾಡುವ ಕಾರ್ಮಿಕರು ನ.ಪಂ.ಕಟ್ಟಡದಲ್ಲಿ ಶೇಖರಗೊಂಡಿರುವ ಕಸವನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿರುವುದರಿಂದ ನಗರದ ಕಸ ಸಂಗ್ರಹಕ್ಕೆ ಹಿನ್ನಡೆಯಾಗಿದೆ ಎಂಬುದು ನಗರ ಪಂಚಾಯತ್ ಅಧಿಕಾರಿಗಳು ನೀಡುವ ಸ್ಪಷ್ಟನೆ. ಆದರೆ ನಗರ ಪಂಚಾಯತ್ ಬಳಿಯ ಕಸ ಸಾಗಾಟದ ನೆಪವೊಡ್ಡಿ ವಾರ್ಡ್‍ಗಳ ಮನೆಗಳಿಂದ ಕಸ ಸಂಗ್ರಹ ಸ್ಥಗಿತ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರ ಪಂಚಾಯತ್ ಕಟ್ಟಡ ಸಮೀಪದಲ್ಲಿ ಸಂಗ್ರಹ ವಾಗಿರುವ ಕಡೆ ವಿಲೇವಾರಿ ಮಾಡುವ ಕಾರಣ ಕೆಲವೆಡೆ ಕಸ ಸಂಗ್ರಹಕ್ಕೆ ತೊಡಕಾಗಿದೆ. ನಾಳೆಯಿಂದ ಎಂದಿನಂತೆ ಕಸ ಸಂಗ್ರಹ ಆರಂಭಿಸಲಾಗುವುದು ಎಂದು ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

ನಗರ ಸಮೀಪದ ಕಟ್ಟಡದಲ್ಲಿರುವ ಕಸವನ್ನು ಒಮ್ಮೆ ಪೂರ್ತಿಯಾಗಿ ವಿಲೇವಾರಿ ಮಾಡುವ ಕೆಲಸ ನಡೆಯುತಿದೆ. ಇದರಿಂದ ನಗರದ ಕೆಲವು ಭಾಗಗಳಲ್ಲಿ ಕಸ ಸಂಗ್ರಹ ಕಾರ್ಯಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಕಸ ಸಂಗ್ರಹ ವಾಹನಗಳು ನಾಳೆಯಿಂದ ವಾರ್ಡ್‍ಗಳಿಗೆ ಕಳುಹಿಸಲಾಗವುದು ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

4 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

9 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

10 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

12 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago