ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

November 16, 2019
7:46 PM

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವಿಶೇಷಚೇತನ ಈಜುಪಟು ವಿಶ್ವಾಸ್ ಕೆ. ಎಸ್. ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕನಸುಗಳು-2019’ ವಾರ್ಷಿಕೋತ್ಸವದ ಅಂಗವಾಗಿ ನಡೆದ ‘ಕನಸು ನನಸು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸಮಾಜ ಮತ್ತು ಕನ್ನಡಿ ನಮ್ಮ ದೊಡ್ಡಗುರು. ಬದುಕಲು ಬೇಕಾದ ಎಲ್ಲಾ ಪಾಠವನ್ನು ಅದು ಕಲಿಸುತ್ತದೆ, ಆದರೆ ನಾವು ನಮ್ಮ ಆಯ್ಕೆಗಳನ್ನು ಪ್ರೀತಿಸಬೇಕು. ಆಯ್ಕೆಗಳನ್ನು, ಅವಕಾಶಗಳನ್ನು ಕೆಲವೊಮ್ಮೆ ನಾವೇ ಬರಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿದ ಮೇಲೆ ಅದರ ಮೇಲೆ ದೃಢನಂಬಿಕೆಯನ್ನು ಇಡಬೇಕು. ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯವೋ ಅದರ ಅವಲೋಕನ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಏಕೆಂದರೆ ಅದರ ಮೇಲೆ ನಮ್ಮ ಮುಂದಿನ ಭವಿಷ್ಯದ ತೀರ್ಮಾನವಾಗುತ್ತದೆ.
ಗೆದ್ದಾಗ ಎಲ್ಲರೂ ಹೊಗಳುತ್ತಾರೆ. ಆದರೆ ಅದು ನಿಮ್ಮನ್ನು ನಿರ್ಲಕ್ಷಿಸಿದವರೇ ಅಂಗೀಕರಿಸುವಂಥ ಸಾಧನೆಯಾಗಿರಬೇಕು. ಎಷ್ಟೋ ಬಾರಿ ಅಂತಃಶಕ್ತಿಯನ್ನೇ ಕುಂದಿಸುವಂತಹ ಮಾತುಗಳು, ಸಂದರ್ಭಗಳು ಎದುರಾದರೂ ಧೃತಿಗೆಡದೆ ಯಶಸ್ಸನ್ನು ಸಾಧಿಸುವ ಛಲ, ಹುಮ್ಮಸ್ಸನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಬಳಿಕ ಅವರು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ನೃತ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಉಪಸ್ಥಿತರಿದ್ದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಶ ಭಟ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror