Advertisement
ಸುದ್ದಿಗಳು

ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

Share

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವಿಶೇಷಚೇತನ ಈಜುಪಟು ವಿಶ್ವಾಸ್ ಕೆ. ಎಸ್. ಹೇಳಿದರು.

Advertisement

ಅವರು ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕನಸುಗಳು-2019’ ವಾರ್ಷಿಕೋತ್ಸವದ ಅಂಗವಾಗಿ ನಡೆದ ‘ಕನಸು ನನಸು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸಮಾಜ ಮತ್ತು ಕನ್ನಡಿ ನಮ್ಮ ದೊಡ್ಡಗುರು. ಬದುಕಲು ಬೇಕಾದ ಎಲ್ಲಾ ಪಾಠವನ್ನು ಅದು ಕಲಿಸುತ್ತದೆ, ಆದರೆ ನಾವು ನಮ್ಮ ಆಯ್ಕೆಗಳನ್ನು ಪ್ರೀತಿಸಬೇಕು. ಆಯ್ಕೆಗಳನ್ನು, ಅವಕಾಶಗಳನ್ನು ಕೆಲವೊಮ್ಮೆ ನಾವೇ ಬರಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿದ ಮೇಲೆ ಅದರ ಮೇಲೆ ದೃಢನಂಬಿಕೆಯನ್ನು ಇಡಬೇಕು. ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯವೋ ಅದರ ಅವಲೋಕನ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಏಕೆಂದರೆ ಅದರ ಮೇಲೆ ನಮ್ಮ ಮುಂದಿನ ಭವಿಷ್ಯದ ತೀರ್ಮಾನವಾಗುತ್ತದೆ.
ಗೆದ್ದಾಗ ಎಲ್ಲರೂ ಹೊಗಳುತ್ತಾರೆ. ಆದರೆ ಅದು ನಿಮ್ಮನ್ನು ನಿರ್ಲಕ್ಷಿಸಿದವರೇ ಅಂಗೀಕರಿಸುವಂಥ ಸಾಧನೆಯಾಗಿರಬೇಕು. ಎಷ್ಟೋ ಬಾರಿ ಅಂತಃಶಕ್ತಿಯನ್ನೇ ಕುಂದಿಸುವಂತಹ ಮಾತುಗಳು, ಸಂದರ್ಭಗಳು ಎದುರಾದರೂ ಧೃತಿಗೆಡದೆ ಯಶಸ್ಸನ್ನು ಸಾಧಿಸುವ ಛಲ, ಹುಮ್ಮಸ್ಸನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಬಳಿಕ ಅವರು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ನೃತ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಉಪಸ್ಥಿತರಿದ್ದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಶ ಭಟ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

4 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

4 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

17 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

23 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago