Advertisement
ಸುದ್ದಿಗಳು

ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

Share

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವಿಶೇಷಚೇತನ ಈಜುಪಟು ವಿಶ್ವಾಸ್ ಕೆ. ಎಸ್. ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕನಸುಗಳು-2019’ ವಾರ್ಷಿಕೋತ್ಸವದ ಅಂಗವಾಗಿ ನಡೆದ ‘ಕನಸು ನನಸು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸಮಾಜ ಮತ್ತು ಕನ್ನಡಿ ನಮ್ಮ ದೊಡ್ಡಗುರು. ಬದುಕಲು ಬೇಕಾದ ಎಲ್ಲಾ ಪಾಠವನ್ನು ಅದು ಕಲಿಸುತ್ತದೆ, ಆದರೆ ನಾವು ನಮ್ಮ ಆಯ್ಕೆಗಳನ್ನು ಪ್ರೀತಿಸಬೇಕು. ಆಯ್ಕೆಗಳನ್ನು, ಅವಕಾಶಗಳನ್ನು ಕೆಲವೊಮ್ಮೆ ನಾವೇ ಬರಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿದ ಮೇಲೆ ಅದರ ಮೇಲೆ ದೃಢನಂಬಿಕೆಯನ್ನು ಇಡಬೇಕು. ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯವೋ ಅದರ ಅವಲೋಕನ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಏಕೆಂದರೆ ಅದರ ಮೇಲೆ ನಮ್ಮ ಮುಂದಿನ ಭವಿಷ್ಯದ ತೀರ್ಮಾನವಾಗುತ್ತದೆ.
ಗೆದ್ದಾಗ ಎಲ್ಲರೂ ಹೊಗಳುತ್ತಾರೆ. ಆದರೆ ಅದು ನಿಮ್ಮನ್ನು ನಿರ್ಲಕ್ಷಿಸಿದವರೇ ಅಂಗೀಕರಿಸುವಂಥ ಸಾಧನೆಯಾಗಿರಬೇಕು. ಎಷ್ಟೋ ಬಾರಿ ಅಂತಃಶಕ್ತಿಯನ್ನೇ ಕುಂದಿಸುವಂತಹ ಮಾತುಗಳು, ಸಂದರ್ಭಗಳು ಎದುರಾದರೂ ಧೃತಿಗೆಡದೆ ಯಶಸ್ಸನ್ನು ಸಾಧಿಸುವ ಛಲ, ಹುಮ್ಮಸ್ಸನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಬಳಿಕ ಅವರು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ನೃತ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಉಪಸ್ಥಿತರಿದ್ದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಶ ಭಟ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

44 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

59 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago