Advertisement
ಸುದ್ದಿಗಳು

ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

Share

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವಿಶೇಷಚೇತನ ಈಜುಪಟು ವಿಶ್ವಾಸ್ ಕೆ. ಎಸ್. ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕನಸುಗಳು-2019’ ವಾರ್ಷಿಕೋತ್ಸವದ ಅಂಗವಾಗಿ ನಡೆದ ‘ಕನಸು ನನಸು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸಮಾಜ ಮತ್ತು ಕನ್ನಡಿ ನಮ್ಮ ದೊಡ್ಡಗುರು. ಬದುಕಲು ಬೇಕಾದ ಎಲ್ಲಾ ಪಾಠವನ್ನು ಅದು ಕಲಿಸುತ್ತದೆ, ಆದರೆ ನಾವು ನಮ್ಮ ಆಯ್ಕೆಗಳನ್ನು ಪ್ರೀತಿಸಬೇಕು. ಆಯ್ಕೆಗಳನ್ನು, ಅವಕಾಶಗಳನ್ನು ಕೆಲವೊಮ್ಮೆ ನಾವೇ ಬರಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿದ ಮೇಲೆ ಅದರ ಮೇಲೆ ದೃಢನಂಬಿಕೆಯನ್ನು ಇಡಬೇಕು. ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯವೋ ಅದರ ಅವಲೋಕನ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಏಕೆಂದರೆ ಅದರ ಮೇಲೆ ನಮ್ಮ ಮುಂದಿನ ಭವಿಷ್ಯದ ತೀರ್ಮಾನವಾಗುತ್ತದೆ.
ಗೆದ್ದಾಗ ಎಲ್ಲರೂ ಹೊಗಳುತ್ತಾರೆ. ಆದರೆ ಅದು ನಿಮ್ಮನ್ನು ನಿರ್ಲಕ್ಷಿಸಿದವರೇ ಅಂಗೀಕರಿಸುವಂಥ ಸಾಧನೆಯಾಗಿರಬೇಕು. ಎಷ್ಟೋ ಬಾರಿ ಅಂತಃಶಕ್ತಿಯನ್ನೇ ಕುಂದಿಸುವಂತಹ ಮಾತುಗಳು, ಸಂದರ್ಭಗಳು ಎದುರಾದರೂ ಧೃತಿಗೆಡದೆ ಯಶಸ್ಸನ್ನು ಸಾಧಿಸುವ ಛಲ, ಹುಮ್ಮಸ್ಸನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಬಳಿಕ ಅವರು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ನೃತ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮಂಜುನಾಥ್ ಉಪಸ್ಥಿತರಿದ್ದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಶ ಭಟ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago