Advertisement
ಸುದ್ದಿಗಳು

ವಿಕ್ರಂ ಲ್ಯಾಂಡರ್​ ಜತೆ ಸಂಪರ್ಕ ಸಾಧ್ಯವಾಗಿಲ್ಲ: ಇಸ್ರೋ ಅಧ್ಯಕ್ಷ ಶಿವನ್

Share

ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್​ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್​ನ 14 ದಿನಗಳ ಜೀವಿತಾವಧಿ ಶನಿವಾರ ಮುಕ್ತಾಯಗೊಂಡಿದೆ. ಹಾಗಾಗಿ ಇಸ್ರೋ ಗಗನಯಾನ ಯೋಜನೆ ಮೇಲೆ ಹೆಚ್ಚಿನ ಒತ್ತು ನೀಡಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

ಐಐಟಿ ಭುವನೇಶ್ವರದ 8 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವನ್,​ ಚಂದ್ರಯಾನ 2 ಆರ್ಬಿಟರ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿರುವ 8 ಉಪಕರಣಗಳು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆ. ಚಂದ್ರಯಾನ 2 ಯೋಜನೆ ಶೇ. 98 ರಷ್ಟು ಯಶಸ್ವಿಯಾಗಿದೆ. ಚಂದ್ರಯಾನ 2 ಯೋಜನೆ ಯಶಸ್ವಿಯಾಗಿರುವುದಕ್ಕೆ 2 ಕಾರಣಗಳಿವೆ. ಅದರಲ್ಲಿ ಮೊದಲನೆಯದು ವಿಜ್ಞಾನ ಮತ್ತು ಎರಡನೆಯದು ತಂತ್ರಜ್ಞಾನಗಳ ಪ್ರದರ್ಶನ. ತಂತ್ರಜ್ಞಾನದ ಬಳಕೆಯಲ್ಲಿ ಯಶಸ್ಸಿನ ಪ್ರಮಾಣ ಪೂರ್ಣವಾಗಿದೆ ಎಂದು ತಿಳಿಸಿದರು.

ಇಸ್ರೋದ ಭವಿಷ್ಯದ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ವರ್ಷ ಗಗನಯಾನ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಮುಂದಿನ ಗುರಿ. ಹಾಗಾಗಿ ಮೊದಲಿಗೆ ಲ್ಯಾಂಡರ್​ಗೆ ಏನಾಗಿದೆ? ಅದು ಸಂಪರ್ಕ ಕಡಿದುಕೊಂಡಿದ್ದು ಏಕೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ರಾಷ್ಟ್ರಮಟ್ಟದ ಸಮಿತಿ ಮತ್ತು ಇಸ್ರೋದ ತಜ್ಞರು ವಿಕ್ರಂ ಲ್ಯಾಂಡರ್​ ಸಂಪರ್ಕ ಕಡಿದುಕೊಳ್ಳಲು ಕಾರಣ ಏನು ಎಂಬುದನ್ನು ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಲೂನಾರ್​ ನೈಟ್​ ಪ್ರಾರಂಭವಾಗಿದೆ. ಇದೇ ಪ್ರದೇಶದಲ್ಲಿ ವಿಕ್ರಂ ಲ್ಯಾಂಡರ್​ ಸೆ. 7 ರಂದು ಇಳಿದಿತ್ತು. ಲೂನಾರ್​ ನೈಟ್​ ಆರಂಭವಾಗಿರುವುದರಿಂದ ಇಲ್ಲಿ ಸೂರ್ಯನ ಬೆಳಕು ತಲುಪುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಕ್ರಂ ಲ್ಯಾಂಡರ್​ ವಿದ್ಯುತ್​ ಉತ್ಪಾದಿಸಲು ಸಾಧ್ಯವಿಲ್ಲ. ಜತೆಗೆ ಲೂನಾರ್​ ನೈಟ್​ ಸಂದರ್ಭದಲ್ಲಿ ದಕ್ಷಿಣ ಧ್ರುವದಲ್ಲಿ ತಾಪಮಾನ ಮೈನಸ್​ 200 ಡಿಗ್ರಿಗಿಂತ ಕಡಿಮೆಯಾಗುತ್ತದೆ. ಇಷ್ಟು ಕಡಿಮೆ ತಾಪಮಾನದಲ್ಲಿ ಲ್ಯಾಂಡರ್​ನಲ್ಲಿರುವ ಉಪಕರಣಗಳು ಚಳಿಯಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಕೆ. ಶಿವನ್​ ಈ ಮೊದಲೇ ತಿಳಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

14 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

14 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

14 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago