Advertisement
ಸುದ್ದಿಗಳು

ವಿಕ್ರಂ ಲ್ಯಾಂಡರ್​ ಜತೆ ಸಂಪರ್ಕ ಸಾಧ್ಯವಾಗಿಲ್ಲ: ಇಸ್ರೋ ಅಧ್ಯಕ್ಷ ಶಿವನ್

Share

ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್​ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್​ನ 14 ದಿನಗಳ ಜೀವಿತಾವಧಿ ಶನಿವಾರ ಮುಕ್ತಾಯಗೊಂಡಿದೆ. ಹಾಗಾಗಿ ಇಸ್ರೋ ಗಗನಯಾನ ಯೋಜನೆ ಮೇಲೆ ಹೆಚ್ಚಿನ ಒತ್ತು ನೀಡಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

ಐಐಟಿ ಭುವನೇಶ್ವರದ 8 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವನ್,​ ಚಂದ್ರಯಾನ 2 ಆರ್ಬಿಟರ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿರುವ 8 ಉಪಕರಣಗಳು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆ. ಚಂದ್ರಯಾನ 2 ಯೋಜನೆ ಶೇ. 98 ರಷ್ಟು ಯಶಸ್ವಿಯಾಗಿದೆ. ಚಂದ್ರಯಾನ 2 ಯೋಜನೆ ಯಶಸ್ವಿಯಾಗಿರುವುದಕ್ಕೆ 2 ಕಾರಣಗಳಿವೆ. ಅದರಲ್ಲಿ ಮೊದಲನೆಯದು ವಿಜ್ಞಾನ ಮತ್ತು ಎರಡನೆಯದು ತಂತ್ರಜ್ಞಾನಗಳ ಪ್ರದರ್ಶನ. ತಂತ್ರಜ್ಞಾನದ ಬಳಕೆಯಲ್ಲಿ ಯಶಸ್ಸಿನ ಪ್ರಮಾಣ ಪೂರ್ಣವಾಗಿದೆ ಎಂದು ತಿಳಿಸಿದರು.

ಇಸ್ರೋದ ಭವಿಷ್ಯದ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ವರ್ಷ ಗಗನಯಾನ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಮುಂದಿನ ಗುರಿ. ಹಾಗಾಗಿ ಮೊದಲಿಗೆ ಲ್ಯಾಂಡರ್​ಗೆ ಏನಾಗಿದೆ? ಅದು ಸಂಪರ್ಕ ಕಡಿದುಕೊಂಡಿದ್ದು ಏಕೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ರಾಷ್ಟ್ರಮಟ್ಟದ ಸಮಿತಿ ಮತ್ತು ಇಸ್ರೋದ ತಜ್ಞರು ವಿಕ್ರಂ ಲ್ಯಾಂಡರ್​ ಸಂಪರ್ಕ ಕಡಿದುಕೊಳ್ಳಲು ಕಾರಣ ಏನು ಎಂಬುದನ್ನು ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಲೂನಾರ್​ ನೈಟ್​ ಪ್ರಾರಂಭವಾಗಿದೆ. ಇದೇ ಪ್ರದೇಶದಲ್ಲಿ ವಿಕ್ರಂ ಲ್ಯಾಂಡರ್​ ಸೆ. 7 ರಂದು ಇಳಿದಿತ್ತು. ಲೂನಾರ್​ ನೈಟ್​ ಆರಂಭವಾಗಿರುವುದರಿಂದ ಇಲ್ಲಿ ಸೂರ್ಯನ ಬೆಳಕು ತಲುಪುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಕ್ರಂ ಲ್ಯಾಂಡರ್​ ವಿದ್ಯುತ್​ ಉತ್ಪಾದಿಸಲು ಸಾಧ್ಯವಿಲ್ಲ. ಜತೆಗೆ ಲೂನಾರ್​ ನೈಟ್​ ಸಂದರ್ಭದಲ್ಲಿ ದಕ್ಷಿಣ ಧ್ರುವದಲ್ಲಿ ತಾಪಮಾನ ಮೈನಸ್​ 200 ಡಿಗ್ರಿಗಿಂತ ಕಡಿಮೆಯಾಗುತ್ತದೆ. ಇಷ್ಟು ಕಡಿಮೆ ತಾಪಮಾನದಲ್ಲಿ ಲ್ಯಾಂಡರ್​ನಲ್ಲಿರುವ ಉಪಕರಣಗಳು ಚಳಿಯಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಕೆ. ಶಿವನ್​ ಈ ಮೊದಲೇ ತಿಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

5 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

7 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

11 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

12 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

21 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

21 hours ago