Advertisement
ಸುದ್ದಿಗಳು

ವಿಕ್ರಂ ಲ್ಯಾಂಡರ್​ ಜತೆ ಸಂಪರ್ಕ ಸಾಧ್ಯವಾಗಿಲ್ಲ: ಇಸ್ರೋ ಅಧ್ಯಕ್ಷ ಶಿವನ್

Share

ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್​ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್​ನ 14 ದಿನಗಳ ಜೀವಿತಾವಧಿ ಶನಿವಾರ ಮುಕ್ತಾಯಗೊಂಡಿದೆ. ಹಾಗಾಗಿ ಇಸ್ರೋ ಗಗನಯಾನ ಯೋಜನೆ ಮೇಲೆ ಹೆಚ್ಚಿನ ಒತ್ತು ನೀಡಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

Advertisement

ಐಐಟಿ ಭುವನೇಶ್ವರದ 8 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವನ್,​ ಚಂದ್ರಯಾನ 2 ಆರ್ಬಿಟರ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿರುವ 8 ಉಪಕರಣಗಳು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆ. ಚಂದ್ರಯಾನ 2 ಯೋಜನೆ ಶೇ. 98 ರಷ್ಟು ಯಶಸ್ವಿಯಾಗಿದೆ. ಚಂದ್ರಯಾನ 2 ಯೋಜನೆ ಯಶಸ್ವಿಯಾಗಿರುವುದಕ್ಕೆ 2 ಕಾರಣಗಳಿವೆ. ಅದರಲ್ಲಿ ಮೊದಲನೆಯದು ವಿಜ್ಞಾನ ಮತ್ತು ಎರಡನೆಯದು ತಂತ್ರಜ್ಞಾನಗಳ ಪ್ರದರ್ಶನ. ತಂತ್ರಜ್ಞಾನದ ಬಳಕೆಯಲ್ಲಿ ಯಶಸ್ಸಿನ ಪ್ರಮಾಣ ಪೂರ್ಣವಾಗಿದೆ ಎಂದು ತಿಳಿಸಿದರು.

ಇಸ್ರೋದ ಭವಿಷ್ಯದ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ವರ್ಷ ಗಗನಯಾನ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಮುಂದಿನ ಗುರಿ. ಹಾಗಾಗಿ ಮೊದಲಿಗೆ ಲ್ಯಾಂಡರ್​ಗೆ ಏನಾಗಿದೆ? ಅದು ಸಂಪರ್ಕ ಕಡಿದುಕೊಂಡಿದ್ದು ಏಕೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ರಾಷ್ಟ್ರಮಟ್ಟದ ಸಮಿತಿ ಮತ್ತು ಇಸ್ರೋದ ತಜ್ಞರು ವಿಕ್ರಂ ಲ್ಯಾಂಡರ್​ ಸಂಪರ್ಕ ಕಡಿದುಕೊಳ್ಳಲು ಕಾರಣ ಏನು ಎಂಬುದನ್ನು ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಲೂನಾರ್​ ನೈಟ್​ ಪ್ರಾರಂಭವಾಗಿದೆ. ಇದೇ ಪ್ರದೇಶದಲ್ಲಿ ವಿಕ್ರಂ ಲ್ಯಾಂಡರ್​ ಸೆ. 7 ರಂದು ಇಳಿದಿತ್ತು. ಲೂನಾರ್​ ನೈಟ್​ ಆರಂಭವಾಗಿರುವುದರಿಂದ ಇಲ್ಲಿ ಸೂರ್ಯನ ಬೆಳಕು ತಲುಪುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಕ್ರಂ ಲ್ಯಾಂಡರ್​ ವಿದ್ಯುತ್​ ಉತ್ಪಾದಿಸಲು ಸಾಧ್ಯವಿಲ್ಲ. ಜತೆಗೆ ಲೂನಾರ್​ ನೈಟ್​ ಸಂದರ್ಭದಲ್ಲಿ ದಕ್ಷಿಣ ಧ್ರುವದಲ್ಲಿ ತಾಪಮಾನ ಮೈನಸ್​ 200 ಡಿಗ್ರಿಗಿಂತ ಕಡಿಮೆಯಾಗುತ್ತದೆ. ಇಷ್ಟು ಕಡಿಮೆ ತಾಪಮಾನದಲ್ಲಿ ಲ್ಯಾಂಡರ್​ನಲ್ಲಿರುವ ಉಪಕರಣಗಳು ಚಳಿಯಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಕೆ. ಶಿವನ್​ ಈ ಮೊದಲೇ ತಿಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

3 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

4 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

15 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

19 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

19 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago