Advertisement
ಸುದ್ದಿಗಳು

ವಿಕ್ರಂ ಲ್ಯಾಂಡರ್​ ಜತೆ ಸಂಪರ್ಕ ಸಾಧ್ಯವಾಗಿಲ್ಲ: ಇಸ್ರೋ ಅಧ್ಯಕ್ಷ ಶಿವನ್

Share

ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್​ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್​ನ 14 ದಿನಗಳ ಜೀವಿತಾವಧಿ ಶನಿವಾರ ಮುಕ್ತಾಯಗೊಂಡಿದೆ. ಹಾಗಾಗಿ ಇಸ್ರೋ ಗಗನಯಾನ ಯೋಜನೆ ಮೇಲೆ ಹೆಚ್ಚಿನ ಒತ್ತು ನೀಡಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

ಐಐಟಿ ಭುವನೇಶ್ವರದ 8 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವನ್,​ ಚಂದ್ರಯಾನ 2 ಆರ್ಬಿಟರ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿರುವ 8 ಉಪಕರಣಗಳು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆ. ಚಂದ್ರಯಾನ 2 ಯೋಜನೆ ಶೇ. 98 ರಷ್ಟು ಯಶಸ್ವಿಯಾಗಿದೆ. ಚಂದ್ರಯಾನ 2 ಯೋಜನೆ ಯಶಸ್ವಿಯಾಗಿರುವುದಕ್ಕೆ 2 ಕಾರಣಗಳಿವೆ. ಅದರಲ್ಲಿ ಮೊದಲನೆಯದು ವಿಜ್ಞಾನ ಮತ್ತು ಎರಡನೆಯದು ತಂತ್ರಜ್ಞಾನಗಳ ಪ್ರದರ್ಶನ. ತಂತ್ರಜ್ಞಾನದ ಬಳಕೆಯಲ್ಲಿ ಯಶಸ್ಸಿನ ಪ್ರಮಾಣ ಪೂರ್ಣವಾಗಿದೆ ಎಂದು ತಿಳಿಸಿದರು.

ಇಸ್ರೋದ ಭವಿಷ್ಯದ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ವರ್ಷ ಗಗನಯಾನ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಮುಂದಿನ ಗುರಿ. ಹಾಗಾಗಿ ಮೊದಲಿಗೆ ಲ್ಯಾಂಡರ್​ಗೆ ಏನಾಗಿದೆ? ಅದು ಸಂಪರ್ಕ ಕಡಿದುಕೊಂಡಿದ್ದು ಏಕೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ರಾಷ್ಟ್ರಮಟ್ಟದ ಸಮಿತಿ ಮತ್ತು ಇಸ್ರೋದ ತಜ್ಞರು ವಿಕ್ರಂ ಲ್ಯಾಂಡರ್​ ಸಂಪರ್ಕ ಕಡಿದುಕೊಳ್ಳಲು ಕಾರಣ ಏನು ಎಂಬುದನ್ನು ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಲೂನಾರ್​ ನೈಟ್​ ಪ್ರಾರಂಭವಾಗಿದೆ. ಇದೇ ಪ್ರದೇಶದಲ್ಲಿ ವಿಕ್ರಂ ಲ್ಯಾಂಡರ್​ ಸೆ. 7 ರಂದು ಇಳಿದಿತ್ತು. ಲೂನಾರ್​ ನೈಟ್​ ಆರಂಭವಾಗಿರುವುದರಿಂದ ಇಲ್ಲಿ ಸೂರ್ಯನ ಬೆಳಕು ತಲುಪುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಕ್ರಂ ಲ್ಯಾಂಡರ್​ ವಿದ್ಯುತ್​ ಉತ್ಪಾದಿಸಲು ಸಾಧ್ಯವಿಲ್ಲ. ಜತೆಗೆ ಲೂನಾರ್​ ನೈಟ್​ ಸಂದರ್ಭದಲ್ಲಿ ದಕ್ಷಿಣ ಧ್ರುವದಲ್ಲಿ ತಾಪಮಾನ ಮೈನಸ್​ 200 ಡಿಗ್ರಿಗಿಂತ ಕಡಿಮೆಯಾಗುತ್ತದೆ. ಇಷ್ಟು ಕಡಿಮೆ ತಾಪಮಾನದಲ್ಲಿ ಲ್ಯಾಂಡರ್​ನಲ್ಲಿರುವ ಉಪಕರಣಗಳು ಚಳಿಯಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಕೆ. ಶಿವನ್​ ಈ ಮೊದಲೇ ತಿಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

8 minutes ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

12 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

13 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

14 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

21 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

1 day ago