ಸುಳ್ಯ: ದ ಕ ಜಿಲ್ಲಾ ವಿಖಾಯ ಸಮಿತಿ ಹಾಗೂ ಸುಳ್ಯ ಝೋನ್ ವಿಖಾಯ ಸಮಿತಿಯ ವತಿಯಿಂದ ಮಂಗಳೂರಿನಿಂದ ಸುಳ್ಯಕ್ಕೆ ವಿಖಾಯ ಮೆಡಿ ಚೈನ್ ಮೂಲಕ ಔಷಧಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸುಳ್ಯದ ಮೆಡಿಕಲ್ ಶಾಪ್ ಗಳಲ್ಲಿ ಸಿಗದಂತಹ ಔಷಧಗಳನ್ನು ವಿಖಾಯ ಕಾರ್ಯಕರ್ತರಿಗೆ ತಿಳಿಸಿದಾಗ, ಮಂಗಳೂರು ವಿಖಾಯ ಕಾರ್ಯಕರ್ತರು ಅಲ್ಲಿನ ಮೆಡಿಕಲ್ ಗಳಿಂದ ಖರೀದಿಸಿ ಬೆಳಿಗ್ಗೆ 10 ಗಂಟೆಗೆ ಬಿ,ಸಿ,ರೋಡ್ ತಲುಪಿಸಲಾಗುತ್ತದೆ. ಅಲ್ಲಿಂದ ಚೈನ್ ಸಿಸ್ಟಮ್ ಮೂಲಕ ಮಾಣಿ, ಕಬಕ, ಪುತ್ತೂರು, ಕುಂಬ್ರ, ತಿಂಗಳಾಡಿ ,ಮಾಡಾವು, ಬೆಳ್ಳಾರೆ, ಪೈಚಾರ್, ಮೂಲಕ ಸುಳ್ಯಕ್ಕೆ ಬರಲಿದೆ. ಸುಳ್ಯಕ್ಕೆ ಬಂದ ಔಷಧಗಳನ್ನು ಸುಳ್ಯದ ವಿಖಾಯ ಸ್ವಯಂ ಸೇವಕರು ನೇರವಾಗಿ ರೋಗಿಗಳ ಮನೆಯವರೆಗೆ ತಲುಪಿಸುತ್ತಾರೆ.
ಸುಳ್ಯ ನಗರದಿಂದ ಕೂಡಾ ಗ್ರಾಮೀಣ ಪ್ರದೇಶಗಳಿಗೆ ಇದೇ ರೀತಿ ಚೈನ್ ಸಿಸ್ಟಮ್ ಮೂಲಕ ಔಷಧಗಳನ್ನು ತಲುಪಿಸಲಾಗುತ್ತಿದೆ. ಇಂದು ಮಂಗಳೂರಿನಿಂದ,ಬೆಳ್ಳಾರೆಯ ಒಬ್ಬ ರೋಗಿಗೆ,ಸುಳ್ಯದ ಒಬ್ಬರಿಗೆ ಹಾಗೂ ಕಲ್ಲುಗುಂಡಿಯ ಒಬ್ಬರಿಗೆ ಔಷಧಗಳನ್ನು ಮೆಡಿ ಚೈನ್ ಮೂಲಕ ತಲುಪಿಸಲಾಗಿದೆ. ಸುಳ್ಯದಲ್ಲಿ ಸಿಗದಂತಹ ಔಷಧಗಳನ್ನು ಮಂಗಳೂರಿನ ಮೆಡಿಕಲ್ ಗಳಿಂದ ಖರೀದಿಸಿ ಸುಳ್ಯದ ಮನೆಗಳಿಗೆ ತಲುಪಿಸಲು ಸುಳ್ಯ ಝೋನ್ ವಿಖಾಯ ಸಮಿತಿಯ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…