Advertisement
ಸುದ್ದಿಗಳು

ವಿಖಾಯ ಮೆಡಿಚೈನ್ ಮೂಲಕ ತುರ್ತು ಔಷಧಗಳು ಮನೆ ಬಾಗಿಲಿಗೆ

Share

ಸುಳ್ಯ: ದ ಕ ಜಿಲ್ಲಾ ವಿಖಾಯ ಸಮಿತಿ ಹಾಗೂ ಸುಳ್ಯ ಝೋನ್ ವಿಖಾಯ ಸಮಿತಿಯ ವತಿಯಿಂದ ಮಂಗಳೂರಿನಿಂದ ಸುಳ್ಯಕ್ಕೆ ವಿಖಾಯ ಮೆಡಿ ಚೈನ್ ಮೂಲಕ ಔಷಧಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸುಳ್ಯದ ಮೆಡಿಕಲ್ ಶಾಪ್ ಗಳಲ್ಲಿ ಸಿಗದಂತಹ ಔಷಧಗಳನ್ನು ವಿಖಾಯ ಕಾರ್ಯಕರ್ತರಿಗೆ ತಿಳಿಸಿದಾಗ, ಮಂಗಳೂರು ವಿಖಾಯ ಕಾರ್ಯಕರ್ತರು ಅಲ್ಲಿನ ಮೆಡಿಕಲ್ ಗಳಿಂದ ಖರೀದಿಸಿ ಬೆಳಿಗ್ಗೆ 10 ಗಂಟೆಗೆ ಬಿ,ಸಿ,ರೋಡ್ ತಲುಪಿಸಲಾಗುತ್ತದೆ. ಅಲ್ಲಿಂದ ಚೈನ್ ಸಿಸ್ಟಮ್ ಮೂಲಕ ಮಾಣಿ, ಕಬಕ, ಪುತ್ತೂರು, ಕುಂಬ್ರ, ತಿಂಗಳಾಡಿ ,ಮಾಡಾವು, ಬೆಳ್ಳಾರೆ, ಪೈಚಾರ್, ಮೂಲಕ ಸುಳ್ಯಕ್ಕೆ ಬರಲಿದೆ. ಸುಳ್ಯಕ್ಕೆ ಬಂದ ಔಷಧಗಳನ್ನು ಸುಳ್ಯದ ವಿಖಾಯ ಸ್ವಯಂ ಸೇವಕರು ನೇರವಾಗಿ ರೋಗಿಗಳ ಮನೆಯವರೆಗೆ ತಲುಪಿಸುತ್ತಾರೆ.

Advertisement

ಸುಳ್ಯ ನಗರದಿಂದ ಕೂಡಾ ಗ್ರಾಮೀಣ ಪ್ರದೇಶಗಳಿಗೆ ಇದೇ ರೀತಿ ಚೈನ್ ಸಿಸ್ಟಮ್ ಮೂಲಕ ಔಷಧಗಳನ್ನು ತಲುಪಿಸಲಾಗುತ್ತಿದೆ. ಇಂದು ಮಂಗಳೂರಿನಿಂದ,ಬೆಳ್ಳಾರೆಯ ಒಬ್ಬ ರೋಗಿಗೆ,ಸುಳ್ಯದ ಒಬ್ಬರಿಗೆ ಹಾಗೂ ಕಲ್ಲುಗುಂಡಿಯ ಒಬ್ಬರಿಗೆ ಔಷಧಗಳನ್ನು ಮೆಡಿ ಚೈನ್ ಮೂಲಕ ತಲುಪಿಸಲಾಗಿದೆ.  ಸುಳ್ಯದಲ್ಲಿ ಸಿಗದಂತಹ ಔಷಧಗಳನ್ನು ಮಂಗಳೂರಿನ ಮೆಡಿಕಲ್ ಗಳಿಂದ ಖರೀದಿಸಿ ಸುಳ್ಯದ ಮನೆಗಳಿಗೆ ತಲುಪಿಸಲು ಸುಳ್ಯ ಝೋನ್ ವಿಖಾಯ ಸಮಿತಿಯ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

7 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

10 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

10 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

19 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

20 hours ago