Advertisement
ಸುದ್ದಿಗಳು

ವಿಜಯದಶಮಿ ಸಭಾ ಕಾರ್ಯಕ್ರಮ : ಸೌಹಾರ್ದತೆಯ ಸಂಕೇತ ದಸರಾ ಹಬ್ಬ – ಶಾಸಕ ಅಪ್ಪಚ್ಚು ರಂಜನ್

Share

ಮಡಿಕೇರಿ :ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮದವರೂ ಒಗ್ಗೂಡಿ ಆಚರಿಸುವ ಹಬ್ಬ ದಸರಾವೆಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿ ನಗರ ದಸರಾ ಸಮಿತಿ ಹಾಗೂ ದಸರಾ ಜನೋತ್ಸವ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ವಿಜಯದಶಮಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಡಿಕೇರಿ ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ದಸರಾ ಕಾರ್ಯಕ್ರಮಗಳ ಆಚರಣೆಯಿಂದ ನಾಡಿನ ಸಂಸ್ಕøತಿ, ಕಲೆ ಉಳಿಸಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಬಾರಿಯ ಮಹಿಳಾ, ಮಕ್ಕಳ, ಯುವಜನರ ಹಾಗೂ ಜನಪದೋತ್ಸವ ದಸರಾಗಳು ಜನಮನ ಸೆಳೆದವು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಮಡಿಕೇರಿ ದಸರಾಕ್ಕೆ ಹೆಚ್ಚಿನ ಜನ ಸೇರಿ ಮೆರುಗು ತಂದಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾ ಜನಸಾಗರದ ಉತ್ಸವವಾಗಿದೆ ಎಂದರು.

ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಮಾತನಾಡಿ ಮಡಿಕೇರಿ ದಸರಾ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಹೀಗೆ ಎಲ್ಲರ ಸಹಕಾರದಿಂದ ಅಚ್ಚುಕಟ್ಟಾಗಿ ನಡೆದಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರು ಮಕ್ಕಳ, ಮಹಿಳೆಯರ, ಜನಪದೋತ್ಸವ ವಿಶಿಷ್ಟವಾಗಿ ಮೂಡಿ ಬಂದಿತು. ದಶಮಂಟಪಗಳನ್ನು ನೋಡುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.

ಕಳೆದ ಎರಡು ವರ್ಷಗಳಿಂದ ಪ್ರಕೃತಿ ವಿಕೋಪದಿಂದ ಹಲವು ಸಂಕಷ್ಟಗಳನ್ನು ಎದುರಿಸುವಂತಾಯಿತು. ಪ್ರಕೃತಿಯ ಶಕ್ತಿ ಮುಂದೆ ಮಾನವ ಏನೂ ಅಲ್ಲ. ಸಂತ್ರಸ್ತರಿಗೆ ಕೈಲಾದಷ್ಟು ನೆರವು ನೀಡಬೇಕಿದೆ. ಪ್ರಕೃತಿ ವಿಕೋಪ ಮುಂದೆಂದೂ ಸಂಭವಿಸದಿರಲಿ ಎಂದು ಇದೇ ಸಂದರ್ಭದಲ್ಲಿ ಆಶಿಸಿದರು.

ಪ್ರಮುಖರಾದ ಬಿ.ಬಿ.ಭಾರತೀಶ್ ಅವರು ಮಾತನಾಡಿ ಪ್ರಕೃತಿ ವಿಕೋಪದ ನಡುವೆ ನಾಲ್ಕು ಶಕ್ತಿ ದೇವತೆಗಳನ್ನು ಪೂಜಿಸಿ ದಸರಾ ಆಚರಿಸುತ್ತಿರುವುದು ವಿಶೇಷವಾಗಿದೆ ಎಂದರು.
ಆಧುನಿಕವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರೈತರು, ಕಾರ್ಮಿಕರು, ವ್ಯಾಪಾರಿಗಳು, ಹೀಗೆ ಎಲ್ಲರಿಗೂ ದಸರಾ ಉಪಯುಕ್ತವಾಗಿದೆ ಎಂದು ಅವರು ಹೇಳಿದರು.

ಕೆ.ಕೆ.ಮಂಜುನಾಥ್ ಕುಮಾರ್ ಅವರು ಮಾತನಾಡಿ ಪ್ರಕೃತಿ ವಿಕೋಪದಿಂದಾಗಿ ಕಳೆದ ವರ್ಷ 20 ಮಂದಿ, ಈ ಬಾರಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಬೆಳೆ ನಷ್ಟ ಉಂಟಾಗಿದೆ. ಕಾರ್ಮಿಕರಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರ ಜೀವನ ಸಂಕಷ್ಟಕ್ಕೆ ದೂಡಿದೆ. ಇವುಗಳೆಲ್ಲವನ್ನೂ ಶಕ್ತಿ ದೇವತೆಗಳು ನಿವಾರಿಸುವಂತಾಗಲಿ ಎಂದು ಅವರು ಪ್ರಾರ್ಥಿಸಿದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ವಿಭಿನ್ನ ಹಾಗೂ ವಿಶಿಷ್ಟವಾಗಿ ಜರುಗುತ್ತಿದೆ. ಈ ಬಾರಿ ಜನಪದೋತ್ಸವವು ಗ್ರಾಮೀಣ ಪ್ರದೇಶದ ಸೊಗಡು, ಕಲೆ, ಸಂಸ್ಕøತಿಯನ್ನು ಪ್ರತಿಬಿಂಬಿಸುವಲ್ಲಿ ವಿಶಿಷ್ಟವಾಗಿತ್ತು ಎಂದರು.

ಪೌರಾಯುಕ್ತರಾದ ರಮೇಶ್ ಅವರು ಮಾತನಾಡಿ ಮಡಿಕೇರಿ ದಸರಾವನ್ನು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಸಲಾಗಿದೆ ಎಂದರು. ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ, ಗೌರವಾಧ್ಯಕ್ಷರಾದ ಪಿ.ಡಿ.ಪೊನ್ನಪ್ಪ ಇತರರು ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾದ ಆರ್.ಬಿ.ರವಿ, ಸ್ವಾಗತ ಸಮಿತಿ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ, ವೇದಿಕೆ ಸಮಿತಿ ಅಧ್ಯಕ್ಷರಾದ ಎ.ಜಿ.ರಮೇಶ್ ಇತರರು ಹಾಜರಿದ್ದರು.

ಅನಿಲ್ ಎಚ್.ಟಿ. ನಿರೂಪಿಸಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಆರ್.ಬಿ.ರವಿ ಸ್ವಾಗತಿಸಿ, ತೆನ್ನಿರ ಮೈನಾ ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

5 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

5 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

5 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

5 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

5 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

14 hours ago