Advertisement
ಜಿಲ್ಲೆ

ವಿಜಯನಗರ ಕಾಲದ ಶಾಸನ ಬೆಳಕಿಗೆ

Share

ಧರ್ಮಸ್ಥಳ :  ಪುನರ್ ಪ್ರತಿಷ್ಠೆ ಮತ್ತು  ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಬೆಳ್ತಂಗಡಿ ತಾಲೂಕಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ  ವಿಜಯನಗರ ಸಾಮ್ರಾಜ್ಯದ ಅಮೂಲ್ಯ ಶಿಲಾಶಾಸನವೊಂದು ಬೆಳಕಿಗೆ ಬಂದಿದೆ.

ಮಧ್ಯದಲ್ಲಿ ತುಂಡರಿಸಲ್ಪಟ್ಟ ಈ ಜೀರ್ಣಗೊಂಡ ಶಾಸನವನ್ನು ಈಗ ಕಬ್ಬಿಣದ ಪಂಜರದಲ್ಲಿ  ಸಂರಕ್ಷಿಸಿಡಲಾಗಿದೆ. ಆಳೆತ್ತರದ ಶಿಲಾ ಫಲಕದ ಮೇಲೆ ಸುಮಾರು ನಲ್ವತ್ತಏಳು ದೀರ್ಘಪಂಕ್ತಿಗಳಲ್ಲಿ ಇದನ್ನು ಬರೆಯಲಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡ ಲಿಪಿಯಲ್ಲೇ ಇದ್ದರೂ ಇದನ್ನು ಯಾರೂ ಅಧ್ಯಯನ ಮಾಡಲು ಪ್ರಯತ್ನಸಿರಲಿಲ್ಲ. ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ, ಶಾಸನ ತಜ್ಞರೂ ಆದ ಡಾ| ವೈ. ಉಮಾನಾಥ ಶೆಣೈಯವರು ಇದನ್ನು ಅಧ್ಯಯನ ಮಾಡಿದಾಗ ಹಲವಾರು ಐತಿಹಾಸಿಕ ವಿಚಾರಗಳು ಬೆಳಕನ್ನು ಕಂಡಿವೆ.

ಈ ಶಿಲಾಶಾಸನ ಶಾಲಿವಾಹನ ಶಕ ಸಾವಿರದ ಮುನ್ನೂರ ಮೂವತ್ತೊಂಭತ್ತನೆಯ ದುರ್ಮುಖಿ ಸಂವತ್ಸರದ ಪುಷ್ಯ ಬಹಳ ಅಮಾವಾಸ್ಯೆ (ಕ್ರಿ.ಶ. 1417ನೇ ಇಸವಿ ಜನವರಿ ತಿಂಗಳ 17ನೇ ತಾರೀಖು) ಆದಿತ್ಯವಾರದಂದು ವಿಜಯನಗರ ಸಾಮ್ರಾಜ್ಯದ ಸಾರ್ವಭೌಮ ಶ್ರೀ ಮನ್ಮಹಾರಾಜಾಧಿರಾಜ ರಾಜ ಪರಮೇಶ್ವರ ಶ್ರೀ ವೀರದೇವರಾಯ ಮಹಾರಾಯರ ಆದೇಶದಂತೆ ಬರೆಯಲಾಗಿತ್ತು. ಇದರಲ್ಲಿ ಭಕ್ತ ಜನರು ಚಂದಕೂರು ದುರ್ಗಾಪರಮೇಶ್ವರಿಯ ದೇವಾಲಯದಲ್ಲಿ ಆಗತಕ್ಕ ಸೇವಾದಿಗಳಿಗೆ ಹಾಗೂ ಬ್ರಾಹ್ಮಣ ಸಂತರ್ಪಣೆಗೆ ಬೇಕಾದ ಭೂಮಿಯನ್ನು ಉಂಬಳಿ ಬಿಟ್ಟ ವಿಚಾರವನ್ನು ತಿಳಿಸಿ ಆ ಬಿಟ್ಟ ಭೂಮಿಯ ಗಡಿರೇಖೆಗಳನ್ನು ಈ ಶಾಸನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಈ ದೇವಾಲಯಕ್ಕೆ ಸಂಬಂಧಿಸಿ ಒಂದು ಅನ್ನಛತ್ರವೂ ಅದನ್ನು ವ್ಯವಸ್ಥಿತವಾಗಿ ನಡೆಸುವ ಒಂದು ಮಠವೂ ಇಲ್ಲಿ ಇದ್ದಂತೆ ಈ ಶಾಸನದಿಂದ ತಿಳಿಯುತ್ತದೆ. ಬಂಗ ಅರಸರು, ನಡ ಗುತ್ತಿನವರು, ಕೆಲವು ಬ್ರಾಹ್ಮಣರು, ಇನ್ನುಳಿದಂತೆ ಅನೇಕ ಶ್ರೀಮಂತ ಭೂಮಾಲಿಕರು, ಈ ವಿನಿಯೋಗಾದಿಗಳಿಗೆ ಭೂಮಿಯನ್ನು ಧಾರೆಯೆರೆದು ಕೊಟ್ಟಿದ್ದರು. ಉಳಿದವರು ಪ್ರತೀ ವರ್ಷ ತಮ್ಮ ಭೂಮಿಯಿಂದ ಬರುವ ಉತ್ಪತ್ತಿಯ ನಿರ್ದಿಷ್ಟ ಅಂಶವನ್ನು ಭತ್ತದ ರೂಪದಲ್ಲಿ ದೇವಾಲಯಕ್ಕೆ ಕೊಡಬೇಕಾಗಿತ್ತು. ಸುಮಾರು 1600 ಮುಡಿ ಭತ್ತ ದೇಣಿಗೆಯ ರೂಪದಲ್ಲಿ ಬರುತಿತ್ತು. ಇದರ ಸರಿಯಾದ ನಿರ್ವಹಣೆಯನ್ನು ಬಂಗರ ಅರಮನೆಯವರು, ನಡದವರು, ಬೀರಣ್ಣ ಎಂಬ ಅಧಿಕಾರಿ ಮತ್ತು ನಾಲ್ಕೂರು ಗ್ರಾಮದವರು ನೋಡಿಕೊಳ್ಳಬೇಕು. ಇದಕ್ಕೆ ಸೂರ್ಯ, ಚಂದ್ರರೇ ಸಾಕ್ಷಿ. ದಾನ ಮಾಡುವವನು ಸ್ವರ್ಗವನ್ನು ಪಡೆಯುತ್ತಾನೆ. ಯಾವಾತನು ಅದನ್ನು ನಡೆಸುತ್ತಾನೋ ಆತನಿಗೆ ಶ್ರೀ ಮಹಾವಿಷ್ಣುಪದ ಪ್ರಾಪ್ತವಾಗುತ್ತದೆ. ಈ ಊರವರು ಇದನ್ನು ನಡೆಸಿಕೊಂಡು ಬರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

12 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago