Advertisement
ಜಿಲ್ಲೆ

ವಿಜಯನಗರ ಕಾಲದ ಶಾಸನ ಬೆಳಕಿಗೆ

Share

ಧರ್ಮಸ್ಥಳ :  ಪುನರ್ ಪ್ರತಿಷ್ಠೆ ಮತ್ತು  ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಬೆಳ್ತಂಗಡಿ ತಾಲೂಕಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ  ವಿಜಯನಗರ ಸಾಮ್ರಾಜ್ಯದ ಅಮೂಲ್ಯ ಶಿಲಾಶಾಸನವೊಂದು ಬೆಳಕಿಗೆ ಬಂದಿದೆ.

Advertisement

ಮಧ್ಯದಲ್ಲಿ ತುಂಡರಿಸಲ್ಪಟ್ಟ ಈ ಜೀರ್ಣಗೊಂಡ ಶಾಸನವನ್ನು ಈಗ ಕಬ್ಬಿಣದ ಪಂಜರದಲ್ಲಿ  ಸಂರಕ್ಷಿಸಿಡಲಾಗಿದೆ. ಆಳೆತ್ತರದ ಶಿಲಾ ಫಲಕದ ಮೇಲೆ ಸುಮಾರು ನಲ್ವತ್ತಏಳು ದೀರ್ಘಪಂಕ್ತಿಗಳಲ್ಲಿ ಇದನ್ನು ಬರೆಯಲಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡ ಲಿಪಿಯಲ್ಲೇ ಇದ್ದರೂ ಇದನ್ನು ಯಾರೂ ಅಧ್ಯಯನ ಮಾಡಲು ಪ್ರಯತ್ನಸಿರಲಿಲ್ಲ. ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ, ಶಾಸನ ತಜ್ಞರೂ ಆದ ಡಾ| ವೈ. ಉಮಾನಾಥ ಶೆಣೈಯವರು ಇದನ್ನು ಅಧ್ಯಯನ ಮಾಡಿದಾಗ ಹಲವಾರು ಐತಿಹಾಸಿಕ ವಿಚಾರಗಳು ಬೆಳಕನ್ನು ಕಂಡಿವೆ.

ಈ ಶಿಲಾಶಾಸನ ಶಾಲಿವಾಹನ ಶಕ ಸಾವಿರದ ಮುನ್ನೂರ ಮೂವತ್ತೊಂಭತ್ತನೆಯ ದುರ್ಮುಖಿ ಸಂವತ್ಸರದ ಪುಷ್ಯ ಬಹಳ ಅಮಾವಾಸ್ಯೆ (ಕ್ರಿ.ಶ. 1417ನೇ ಇಸವಿ ಜನವರಿ ತಿಂಗಳ 17ನೇ ತಾರೀಖು) ಆದಿತ್ಯವಾರದಂದು ವಿಜಯನಗರ ಸಾಮ್ರಾಜ್ಯದ ಸಾರ್ವಭೌಮ ಶ್ರೀ ಮನ್ಮಹಾರಾಜಾಧಿರಾಜ ರಾಜ ಪರಮೇಶ್ವರ ಶ್ರೀ ವೀರದೇವರಾಯ ಮಹಾರಾಯರ ಆದೇಶದಂತೆ ಬರೆಯಲಾಗಿತ್ತು. ಇದರಲ್ಲಿ ಭಕ್ತ ಜನರು ಚಂದಕೂರು ದುರ್ಗಾಪರಮೇಶ್ವರಿಯ ದೇವಾಲಯದಲ್ಲಿ ಆಗತಕ್ಕ ಸೇವಾದಿಗಳಿಗೆ ಹಾಗೂ ಬ್ರಾಹ್ಮಣ ಸಂತರ್ಪಣೆಗೆ ಬೇಕಾದ ಭೂಮಿಯನ್ನು ಉಂಬಳಿ ಬಿಟ್ಟ ವಿಚಾರವನ್ನು ತಿಳಿಸಿ ಆ ಬಿಟ್ಟ ಭೂಮಿಯ ಗಡಿರೇಖೆಗಳನ್ನು ಈ ಶಾಸನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಈ ದೇವಾಲಯಕ್ಕೆ ಸಂಬಂಧಿಸಿ ಒಂದು ಅನ್ನಛತ್ರವೂ ಅದನ್ನು ವ್ಯವಸ್ಥಿತವಾಗಿ ನಡೆಸುವ ಒಂದು ಮಠವೂ ಇಲ್ಲಿ ಇದ್ದಂತೆ ಈ ಶಾಸನದಿಂದ ತಿಳಿಯುತ್ತದೆ. ಬಂಗ ಅರಸರು, ನಡ ಗುತ್ತಿನವರು, ಕೆಲವು ಬ್ರಾಹ್ಮಣರು, ಇನ್ನುಳಿದಂತೆ ಅನೇಕ ಶ್ರೀಮಂತ ಭೂಮಾಲಿಕರು, ಈ ವಿನಿಯೋಗಾದಿಗಳಿಗೆ ಭೂಮಿಯನ್ನು ಧಾರೆಯೆರೆದು ಕೊಟ್ಟಿದ್ದರು. ಉಳಿದವರು ಪ್ರತೀ ವರ್ಷ ತಮ್ಮ ಭೂಮಿಯಿಂದ ಬರುವ ಉತ್ಪತ್ತಿಯ ನಿರ್ದಿಷ್ಟ ಅಂಶವನ್ನು ಭತ್ತದ ರೂಪದಲ್ಲಿ ದೇವಾಲಯಕ್ಕೆ ಕೊಡಬೇಕಾಗಿತ್ತು. ಸುಮಾರು 1600 ಮುಡಿ ಭತ್ತ ದೇಣಿಗೆಯ ರೂಪದಲ್ಲಿ ಬರುತಿತ್ತು. ಇದರ ಸರಿಯಾದ ನಿರ್ವಹಣೆಯನ್ನು ಬಂಗರ ಅರಮನೆಯವರು, ನಡದವರು, ಬೀರಣ್ಣ ಎಂಬ ಅಧಿಕಾರಿ ಮತ್ತು ನಾಲ್ಕೂರು ಗ್ರಾಮದವರು ನೋಡಿಕೊಳ್ಳಬೇಕು. ಇದಕ್ಕೆ ಸೂರ್ಯ, ಚಂದ್ರರೇ ಸಾಕ್ಷಿ. ದಾನ ಮಾಡುವವನು ಸ್ವರ್ಗವನ್ನು ಪಡೆಯುತ್ತಾನೆ. ಯಾವಾತನು ಅದನ್ನು ನಡೆಸುತ್ತಾನೋ ಆತನಿಗೆ ಶ್ರೀ ಮಹಾವಿಷ್ಣುಪದ ಪ್ರಾಪ್ತವಾಗುತ್ತದೆ. ಈ ಊರವರು ಇದನ್ನು ನಡೆಸಿಕೊಂಡು ಬರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

13 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

13 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

13 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

13 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

13 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

13 hours ago