Advertisement
ಜಿಲ್ಲೆ

ವಿಜಯನಗರ ಕಾಲದ ಶಾಸನ ಬೆಳಕಿಗೆ

Share

ಧರ್ಮಸ್ಥಳ :  ಪುನರ್ ಪ್ರತಿಷ್ಠೆ ಮತ್ತು  ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಬೆಳ್ತಂಗಡಿ ತಾಲೂಕಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ  ವಿಜಯನಗರ ಸಾಮ್ರಾಜ್ಯದ ಅಮೂಲ್ಯ ಶಿಲಾಶಾಸನವೊಂದು ಬೆಳಕಿಗೆ ಬಂದಿದೆ.

ಮಧ್ಯದಲ್ಲಿ ತುಂಡರಿಸಲ್ಪಟ್ಟ ಈ ಜೀರ್ಣಗೊಂಡ ಶಾಸನವನ್ನು ಈಗ ಕಬ್ಬಿಣದ ಪಂಜರದಲ್ಲಿ  ಸಂರಕ್ಷಿಸಿಡಲಾಗಿದೆ. ಆಳೆತ್ತರದ ಶಿಲಾ ಫಲಕದ ಮೇಲೆ ಸುಮಾರು ನಲ್ವತ್ತಏಳು ದೀರ್ಘಪಂಕ್ತಿಗಳಲ್ಲಿ ಇದನ್ನು ಬರೆಯಲಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡ ಲಿಪಿಯಲ್ಲೇ ಇದ್ದರೂ ಇದನ್ನು ಯಾರೂ ಅಧ್ಯಯನ ಮಾಡಲು ಪ್ರಯತ್ನಸಿರಲಿಲ್ಲ. ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ, ಶಾಸನ ತಜ್ಞರೂ ಆದ ಡಾ| ವೈ. ಉಮಾನಾಥ ಶೆಣೈಯವರು ಇದನ್ನು ಅಧ್ಯಯನ ಮಾಡಿದಾಗ ಹಲವಾರು ಐತಿಹಾಸಿಕ ವಿಚಾರಗಳು ಬೆಳಕನ್ನು ಕಂಡಿವೆ.

ಈ ಶಿಲಾಶಾಸನ ಶಾಲಿವಾಹನ ಶಕ ಸಾವಿರದ ಮುನ್ನೂರ ಮೂವತ್ತೊಂಭತ್ತನೆಯ ದುರ್ಮುಖಿ ಸಂವತ್ಸರದ ಪುಷ್ಯ ಬಹಳ ಅಮಾವಾಸ್ಯೆ (ಕ್ರಿ.ಶ. 1417ನೇ ಇಸವಿ ಜನವರಿ ತಿಂಗಳ 17ನೇ ತಾರೀಖು) ಆದಿತ್ಯವಾರದಂದು ವಿಜಯನಗರ ಸಾಮ್ರಾಜ್ಯದ ಸಾರ್ವಭೌಮ ಶ್ರೀ ಮನ್ಮಹಾರಾಜಾಧಿರಾಜ ರಾಜ ಪರಮೇಶ್ವರ ಶ್ರೀ ವೀರದೇವರಾಯ ಮಹಾರಾಯರ ಆದೇಶದಂತೆ ಬರೆಯಲಾಗಿತ್ತು. ಇದರಲ್ಲಿ ಭಕ್ತ ಜನರು ಚಂದಕೂರು ದುರ್ಗಾಪರಮೇಶ್ವರಿಯ ದೇವಾಲಯದಲ್ಲಿ ಆಗತಕ್ಕ ಸೇವಾದಿಗಳಿಗೆ ಹಾಗೂ ಬ್ರಾಹ್ಮಣ ಸಂತರ್ಪಣೆಗೆ ಬೇಕಾದ ಭೂಮಿಯನ್ನು ಉಂಬಳಿ ಬಿಟ್ಟ ವಿಚಾರವನ್ನು ತಿಳಿಸಿ ಆ ಬಿಟ್ಟ ಭೂಮಿಯ ಗಡಿರೇಖೆಗಳನ್ನು ಈ ಶಾಸನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಈ ದೇವಾಲಯಕ್ಕೆ ಸಂಬಂಧಿಸಿ ಒಂದು ಅನ್ನಛತ್ರವೂ ಅದನ್ನು ವ್ಯವಸ್ಥಿತವಾಗಿ ನಡೆಸುವ ಒಂದು ಮಠವೂ ಇಲ್ಲಿ ಇದ್ದಂತೆ ಈ ಶಾಸನದಿಂದ ತಿಳಿಯುತ್ತದೆ. ಬಂಗ ಅರಸರು, ನಡ ಗುತ್ತಿನವರು, ಕೆಲವು ಬ್ರಾಹ್ಮಣರು, ಇನ್ನುಳಿದಂತೆ ಅನೇಕ ಶ್ರೀಮಂತ ಭೂಮಾಲಿಕರು, ಈ ವಿನಿಯೋಗಾದಿಗಳಿಗೆ ಭೂಮಿಯನ್ನು ಧಾರೆಯೆರೆದು ಕೊಟ್ಟಿದ್ದರು. ಉಳಿದವರು ಪ್ರತೀ ವರ್ಷ ತಮ್ಮ ಭೂಮಿಯಿಂದ ಬರುವ ಉತ್ಪತ್ತಿಯ ನಿರ್ದಿಷ್ಟ ಅಂಶವನ್ನು ಭತ್ತದ ರೂಪದಲ್ಲಿ ದೇವಾಲಯಕ್ಕೆ ಕೊಡಬೇಕಾಗಿತ್ತು. ಸುಮಾರು 1600 ಮುಡಿ ಭತ್ತ ದೇಣಿಗೆಯ ರೂಪದಲ್ಲಿ ಬರುತಿತ್ತು. ಇದರ ಸರಿಯಾದ ನಿರ್ವಹಣೆಯನ್ನು ಬಂಗರ ಅರಮನೆಯವರು, ನಡದವರು, ಬೀರಣ್ಣ ಎಂಬ ಅಧಿಕಾರಿ ಮತ್ತು ನಾಲ್ಕೂರು ಗ್ರಾಮದವರು ನೋಡಿಕೊಳ್ಳಬೇಕು. ಇದಕ್ಕೆ ಸೂರ್ಯ, ಚಂದ್ರರೇ ಸಾಕ್ಷಿ. ದಾನ ಮಾಡುವವನು ಸ್ವರ್ಗವನ್ನು ಪಡೆಯುತ್ತಾನೆ. ಯಾವಾತನು ಅದನ್ನು ನಡೆಸುತ್ತಾನೋ ಆತನಿಗೆ ಶ್ರೀ ಮಹಾವಿಷ್ಣುಪದ ಪ್ರಾಪ್ತವಾಗುತ್ತದೆ. ಈ ಊರವರು ಇದನ್ನು ನಡೆಸಿಕೊಂಡು ಬರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

23 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

24 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago