Advertisement
ಜಿಲ್ಲೆ

ವಿಜಯನಗರ ಕಾಲದ ಶಾಸನ ಬೆಳಕಿಗೆ

Share

ಧರ್ಮಸ್ಥಳ :  ಪುನರ್ ಪ್ರತಿಷ್ಠೆ ಮತ್ತು  ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಬೆಳ್ತಂಗಡಿ ತಾಲೂಕಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ  ವಿಜಯನಗರ ಸಾಮ್ರಾಜ್ಯದ ಅಮೂಲ್ಯ ಶಿಲಾಶಾಸನವೊಂದು ಬೆಳಕಿಗೆ ಬಂದಿದೆ.

ಮಧ್ಯದಲ್ಲಿ ತುಂಡರಿಸಲ್ಪಟ್ಟ ಈ ಜೀರ್ಣಗೊಂಡ ಶಾಸನವನ್ನು ಈಗ ಕಬ್ಬಿಣದ ಪಂಜರದಲ್ಲಿ  ಸಂರಕ್ಷಿಸಿಡಲಾಗಿದೆ. ಆಳೆತ್ತರದ ಶಿಲಾ ಫಲಕದ ಮೇಲೆ ಸುಮಾರು ನಲ್ವತ್ತಏಳು ದೀರ್ಘಪಂಕ್ತಿಗಳಲ್ಲಿ ಇದನ್ನು ಬರೆಯಲಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡ ಲಿಪಿಯಲ್ಲೇ ಇದ್ದರೂ ಇದನ್ನು ಯಾರೂ ಅಧ್ಯಯನ ಮಾಡಲು ಪ್ರಯತ್ನಸಿರಲಿಲ್ಲ. ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ, ಶಾಸನ ತಜ್ಞರೂ ಆದ ಡಾ| ವೈ. ಉಮಾನಾಥ ಶೆಣೈಯವರು ಇದನ್ನು ಅಧ್ಯಯನ ಮಾಡಿದಾಗ ಹಲವಾರು ಐತಿಹಾಸಿಕ ವಿಚಾರಗಳು ಬೆಳಕನ್ನು ಕಂಡಿವೆ.

ಈ ಶಿಲಾಶಾಸನ ಶಾಲಿವಾಹನ ಶಕ ಸಾವಿರದ ಮುನ್ನೂರ ಮೂವತ್ತೊಂಭತ್ತನೆಯ ದುರ್ಮುಖಿ ಸಂವತ್ಸರದ ಪುಷ್ಯ ಬಹಳ ಅಮಾವಾಸ್ಯೆ (ಕ್ರಿ.ಶ. 1417ನೇ ಇಸವಿ ಜನವರಿ ತಿಂಗಳ 17ನೇ ತಾರೀಖು) ಆದಿತ್ಯವಾರದಂದು ವಿಜಯನಗರ ಸಾಮ್ರಾಜ್ಯದ ಸಾರ್ವಭೌಮ ಶ್ರೀ ಮನ್ಮಹಾರಾಜಾಧಿರಾಜ ರಾಜ ಪರಮೇಶ್ವರ ಶ್ರೀ ವೀರದೇವರಾಯ ಮಹಾರಾಯರ ಆದೇಶದಂತೆ ಬರೆಯಲಾಗಿತ್ತು. ಇದರಲ್ಲಿ ಭಕ್ತ ಜನರು ಚಂದಕೂರು ದುರ್ಗಾಪರಮೇಶ್ವರಿಯ ದೇವಾಲಯದಲ್ಲಿ ಆಗತಕ್ಕ ಸೇವಾದಿಗಳಿಗೆ ಹಾಗೂ ಬ್ರಾಹ್ಮಣ ಸಂತರ್ಪಣೆಗೆ ಬೇಕಾದ ಭೂಮಿಯನ್ನು ಉಂಬಳಿ ಬಿಟ್ಟ ವಿಚಾರವನ್ನು ತಿಳಿಸಿ ಆ ಬಿಟ್ಟ ಭೂಮಿಯ ಗಡಿರೇಖೆಗಳನ್ನು ಈ ಶಾಸನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಈ ದೇವಾಲಯಕ್ಕೆ ಸಂಬಂಧಿಸಿ ಒಂದು ಅನ್ನಛತ್ರವೂ ಅದನ್ನು ವ್ಯವಸ್ಥಿತವಾಗಿ ನಡೆಸುವ ಒಂದು ಮಠವೂ ಇಲ್ಲಿ ಇದ್ದಂತೆ ಈ ಶಾಸನದಿಂದ ತಿಳಿಯುತ್ತದೆ. ಬಂಗ ಅರಸರು, ನಡ ಗುತ್ತಿನವರು, ಕೆಲವು ಬ್ರಾಹ್ಮಣರು, ಇನ್ನುಳಿದಂತೆ ಅನೇಕ ಶ್ರೀಮಂತ ಭೂಮಾಲಿಕರು, ಈ ವಿನಿಯೋಗಾದಿಗಳಿಗೆ ಭೂಮಿಯನ್ನು ಧಾರೆಯೆರೆದು ಕೊಟ್ಟಿದ್ದರು. ಉಳಿದವರು ಪ್ರತೀ ವರ್ಷ ತಮ್ಮ ಭೂಮಿಯಿಂದ ಬರುವ ಉತ್ಪತ್ತಿಯ ನಿರ್ದಿಷ್ಟ ಅಂಶವನ್ನು ಭತ್ತದ ರೂಪದಲ್ಲಿ ದೇವಾಲಯಕ್ಕೆ ಕೊಡಬೇಕಾಗಿತ್ತು. ಸುಮಾರು 1600 ಮುಡಿ ಭತ್ತ ದೇಣಿಗೆಯ ರೂಪದಲ್ಲಿ ಬರುತಿತ್ತು. ಇದರ ಸರಿಯಾದ ನಿರ್ವಹಣೆಯನ್ನು ಬಂಗರ ಅರಮನೆಯವರು, ನಡದವರು, ಬೀರಣ್ಣ ಎಂಬ ಅಧಿಕಾರಿ ಮತ್ತು ನಾಲ್ಕೂರು ಗ್ರಾಮದವರು ನೋಡಿಕೊಳ್ಳಬೇಕು. ಇದಕ್ಕೆ ಸೂರ್ಯ, ಚಂದ್ರರೇ ಸಾಕ್ಷಿ. ದಾನ ಮಾಡುವವನು ಸ್ವರ್ಗವನ್ನು ಪಡೆಯುತ್ತಾನೆ. ಯಾವಾತನು ಅದನ್ನು ನಡೆಸುತ್ತಾನೋ ಆತನಿಗೆ ಶ್ರೀ ಮಹಾವಿಷ್ಣುಪದ ಪ್ರಾಪ್ತವಾಗುತ್ತದೆ. ಈ ಊರವರು ಇದನ್ನು ನಡೆಸಿಕೊಂಡು ಬರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

3 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

11 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

20 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago