Advertisement
ಜಿಲ್ಲೆ

ವಿಜಯನಗರ ಕಾಲದ ಶಾಸನ ಬೆಳಕಿಗೆ

Share

ಧರ್ಮಸ್ಥಳ :  ಪುನರ್ ಪ್ರತಿಷ್ಠೆ ಮತ್ತು  ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಬೆಳ್ತಂಗಡಿ ತಾಲೂಕಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ  ವಿಜಯನಗರ ಸಾಮ್ರಾಜ್ಯದ ಅಮೂಲ್ಯ ಶಿಲಾಶಾಸನವೊಂದು ಬೆಳಕಿಗೆ ಬಂದಿದೆ.

ಮಧ್ಯದಲ್ಲಿ ತುಂಡರಿಸಲ್ಪಟ್ಟ ಈ ಜೀರ್ಣಗೊಂಡ ಶಾಸನವನ್ನು ಈಗ ಕಬ್ಬಿಣದ ಪಂಜರದಲ್ಲಿ  ಸಂರಕ್ಷಿಸಿಡಲಾಗಿದೆ. ಆಳೆತ್ತರದ ಶಿಲಾ ಫಲಕದ ಮೇಲೆ ಸುಮಾರು ನಲ್ವತ್ತಏಳು ದೀರ್ಘಪಂಕ್ತಿಗಳಲ್ಲಿ ಇದನ್ನು ಬರೆಯಲಾಗಿದೆ. ಕನ್ನಡ ಭಾಷೆ ಹಾಗೂ ಕನ್ನಡ ಲಿಪಿಯಲ್ಲೇ ಇದ್ದರೂ ಇದನ್ನು ಯಾರೂ ಅಧ್ಯಯನ ಮಾಡಲು ಪ್ರಯತ್ನಸಿರಲಿಲ್ಲ. ನಿವೃತ್ತ ಇತಿಹಾಸ ಪ್ರಾಧ್ಯಾಪಕರೂ, ಶಾಸನ ತಜ್ಞರೂ ಆದ ಡಾ| ವೈ. ಉಮಾನಾಥ ಶೆಣೈಯವರು ಇದನ್ನು ಅಧ್ಯಯನ ಮಾಡಿದಾಗ ಹಲವಾರು ಐತಿಹಾಸಿಕ ವಿಚಾರಗಳು ಬೆಳಕನ್ನು ಕಂಡಿವೆ.

ಈ ಶಿಲಾಶಾಸನ ಶಾಲಿವಾಹನ ಶಕ ಸಾವಿರದ ಮುನ್ನೂರ ಮೂವತ್ತೊಂಭತ್ತನೆಯ ದುರ್ಮುಖಿ ಸಂವತ್ಸರದ ಪುಷ್ಯ ಬಹಳ ಅಮಾವಾಸ್ಯೆ (ಕ್ರಿ.ಶ. 1417ನೇ ಇಸವಿ ಜನವರಿ ತಿಂಗಳ 17ನೇ ತಾರೀಖು) ಆದಿತ್ಯವಾರದಂದು ವಿಜಯನಗರ ಸಾಮ್ರಾಜ್ಯದ ಸಾರ್ವಭೌಮ ಶ್ರೀ ಮನ್ಮಹಾರಾಜಾಧಿರಾಜ ರಾಜ ಪರಮೇಶ್ವರ ಶ್ರೀ ವೀರದೇವರಾಯ ಮಹಾರಾಯರ ಆದೇಶದಂತೆ ಬರೆಯಲಾಗಿತ್ತು. ಇದರಲ್ಲಿ ಭಕ್ತ ಜನರು ಚಂದಕೂರು ದುರ್ಗಾಪರಮೇಶ್ವರಿಯ ದೇವಾಲಯದಲ್ಲಿ ಆಗತಕ್ಕ ಸೇವಾದಿಗಳಿಗೆ ಹಾಗೂ ಬ್ರಾಹ್ಮಣ ಸಂತರ್ಪಣೆಗೆ ಬೇಕಾದ ಭೂಮಿಯನ್ನು ಉಂಬಳಿ ಬಿಟ್ಟ ವಿಚಾರವನ್ನು ತಿಳಿಸಿ ಆ ಬಿಟ್ಟ ಭೂಮಿಯ ಗಡಿರೇಖೆಗಳನ್ನು ಈ ಶಾಸನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಈ ದೇವಾಲಯಕ್ಕೆ ಸಂಬಂಧಿಸಿ ಒಂದು ಅನ್ನಛತ್ರವೂ ಅದನ್ನು ವ್ಯವಸ್ಥಿತವಾಗಿ ನಡೆಸುವ ಒಂದು ಮಠವೂ ಇಲ್ಲಿ ಇದ್ದಂತೆ ಈ ಶಾಸನದಿಂದ ತಿಳಿಯುತ್ತದೆ. ಬಂಗ ಅರಸರು, ನಡ ಗುತ್ತಿನವರು, ಕೆಲವು ಬ್ರಾಹ್ಮಣರು, ಇನ್ನುಳಿದಂತೆ ಅನೇಕ ಶ್ರೀಮಂತ ಭೂಮಾಲಿಕರು, ಈ ವಿನಿಯೋಗಾದಿಗಳಿಗೆ ಭೂಮಿಯನ್ನು ಧಾರೆಯೆರೆದು ಕೊಟ್ಟಿದ್ದರು. ಉಳಿದವರು ಪ್ರತೀ ವರ್ಷ ತಮ್ಮ ಭೂಮಿಯಿಂದ ಬರುವ ಉತ್ಪತ್ತಿಯ ನಿರ್ದಿಷ್ಟ ಅಂಶವನ್ನು ಭತ್ತದ ರೂಪದಲ್ಲಿ ದೇವಾಲಯಕ್ಕೆ ಕೊಡಬೇಕಾಗಿತ್ತು. ಸುಮಾರು 1600 ಮುಡಿ ಭತ್ತ ದೇಣಿಗೆಯ ರೂಪದಲ್ಲಿ ಬರುತಿತ್ತು. ಇದರ ಸರಿಯಾದ ನಿರ್ವಹಣೆಯನ್ನು ಬಂಗರ ಅರಮನೆಯವರು, ನಡದವರು, ಬೀರಣ್ಣ ಎಂಬ ಅಧಿಕಾರಿ ಮತ್ತು ನಾಲ್ಕೂರು ಗ್ರಾಮದವರು ನೋಡಿಕೊಳ್ಳಬೇಕು. ಇದಕ್ಕೆ ಸೂರ್ಯ, ಚಂದ್ರರೇ ಸಾಕ್ಷಿ. ದಾನ ಮಾಡುವವನು ಸ್ವರ್ಗವನ್ನು ಪಡೆಯುತ್ತಾನೆ. ಯಾವಾತನು ಅದನ್ನು ನಡೆಸುತ್ತಾನೋ ಆತನಿಗೆ ಶ್ರೀ ಮಹಾವಿಷ್ಣುಪದ ಪ್ರಾಪ್ತವಾಗುತ್ತದೆ. ಈ ಊರವರು ಇದನ್ನು ನಡೆಸಿಕೊಂಡು ಬರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

9 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

17 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

24 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago