ವಿಜಯಪುರ-ಮಂಗಳೂರು ರೈಲಿಗೆ ನೆಟ್ಟಣದಲ್ಲಿ ಸ್ವಾಗತ

November 13, 2019
2:33 PM

ನೆಟ್ಟಣ: ಸುಬ್ರಹ್ಮಣ್ಯ ರೋಡ್  ರೈಲು ನಿಲ್ದಾಣಕ್ಕೆ ಆಗಮಿಸಿದ ವಿಜಯಪುರ-ಮಂಗಳೂರು ಸೂಪರ್ ಫಾಸ್ಟ್ ರೈಲಿಗೆ ಸುಬ್ರಹ್ಮಣ್ಯ ರೋಡ್‍ನ ರೈಲು ನಿಲ್ದಾಣದಲ್ಲಿ  ಸ್ವಾಗತ ಕೋರಲಾಯಿತು. ರೈಲಿಗೆ ಹೂಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗುರುಪಾದ , ಸುರೇಶ್ ಭಟ್.ಬಿ, ಉದಯ ಕುಮಾರ್ ನೂಚಿಲ,  ಬಸವರಾಜ್, ಪರಮೇಶ್, ಶಂಕರ, ಮಂಜು, ಸಂತೋಷ್, ಕರಿಬಸವ ಉಪಸ್ಥಿತರಿದ್ದರು.

ವಿಜಯಪುರದಿಂದ ಮಂಗಳೂರು ಸಂಪರ್ಕಿಸಲು ಮತ್ತು ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಕರಾವಳಿಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಸಂದರ್ಶಿಸಲು ಈ ರೈಲು ವಿಶೇಷ ಅನುಕೂಲತೆ ಒದಗಿಸಿದೆ. ಸಂಜೆ 6ಗಂಟೆಗೆ ವಿಜಯಪುರದಿಂದ ಹೊರಡಲಿರುವ ರೈಲು ಬಸವನ ಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಅರಸಿಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು ಮೂಲಕ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ತಲುಪಲಿದೆ.ಅದೇ ರೀತಿ ಮಂಗಳೂರಿನಿಂದ ಸಂಜೆ 4.30ಕ್ಕೆ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ವಿಜಯಪುರ ತಲುಪಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror