ನೆಟ್ಟಣ: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ವಿಜಯಪುರ-ಮಂಗಳೂರು ಸೂಪರ್ ಫಾಸ್ಟ್ ರೈಲಿಗೆ ಸುಬ್ರಹ್ಮಣ್ಯ ರೋಡ್ನ ರೈಲು ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು. ರೈಲಿಗೆ ಹೂಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗುರುಪಾದ , ಸುರೇಶ್ ಭಟ್.ಬಿ, ಉದಯ ಕುಮಾರ್ ನೂಚಿಲ, ಬಸವರಾಜ್, ಪರಮೇಶ್, ಶಂಕರ, ಮಂಜು, ಸಂತೋಷ್, ಕರಿಬಸವ ಉಪಸ್ಥಿತರಿದ್ದರು.
ವಿಜಯಪುರದಿಂದ ಮಂಗಳೂರು ಸಂಪರ್ಕಿಸಲು ಮತ್ತು ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಕರಾವಳಿಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಸಂದರ್ಶಿಸಲು ಈ ರೈಲು ವಿಶೇಷ ಅನುಕೂಲತೆ ಒದಗಿಸಿದೆ. ಸಂಜೆ 6ಗಂಟೆಗೆ ವಿಜಯಪುರದಿಂದ ಹೊರಡಲಿರುವ ರೈಲು ಬಸವನ ಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಅರಸಿಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು ಮೂಲಕ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ತಲುಪಲಿದೆ.ಅದೇ ರೀತಿ ಮಂಗಳೂರಿನಿಂದ ಸಂಜೆ 4.30ಕ್ಕೆ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ವಿಜಯಪುರ ತಲುಪಲಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…