ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

December 2, 2019
9:59 PM

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.

Advertisement
Advertisement

ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.

ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.

ಚಿತ್ರಗಳು : ಮಂಜು ನೀರೇಶ್ವಾಲ್ಯ 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror