ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…