ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…