Advertisement
ಧಾರ್ಮಿಕ

ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

Share

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.

ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.

ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.

ಚಿತ್ರಗಳು : ಮಂಜು ನೀರೇಶ್ವಾಲ್ಯ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

18 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago