ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…