ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…