ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…