ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…