ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…