ವಿದೇಶಿ ರೊಟೇರಿಯನ್ನರ ತಂಡ ಸುಳ್ಯಕ್ಕೆ ಭೇಟಿ

January 25, 2020
1:51 PM

ಸುಳ್ಯ: ರೈಡ್ ಫಾರ್ ರೋಟರಿಯ 14 ದೇಶಗಳ 38 ವಿದೇಶಿ ರೋಟೇರಿಯನ್ನರ ತಂಡವು ಸುಳ್ಯ ರೋಟರಿ ಕ್ಲಬ್ ಗೆ ಭೇಟಿ ನೀಡಿ ವಿಚಾರ ವಿನಿಮಯ ನಡೆಸಿತು. ಸೇವೆಗಾಗಿ ನಿಧಿ ಸಂಗ್ರಹ ಈ ತಂಡದ ಭೇಟಿಯ ಪ್ರಮುಖ ಉದ್ದೇಶ. ಈ ತಂಡವು ಮಂಗಳೂರಿನಿಂದ ಹೊರಟು ಮಡಿಕೇರಿ, ಮೈಸೂರು, ಊಟಿ, ವಯನಾಡು, ಕೊಯಂಬುತ್ತೂರು, ಮೂನಾರ್, ಕೊಚ್ಚಿನ್ ನಲ್ಲಿ 29 ರಂದು ಸಮಾಪನಗೊಳ್ಳಲಿದೆ.

Advertisement
Advertisement

Advertisement

ರೋಟರಿ ಕ್ಲಬ್ ಸುಳ್ಯದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ರೊ .ಡಾ. ಪುರುಷೋತ್ತಮ ಕೆ.ಜಿ. ವಿದೇಶಿ ತಂಡದವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ರೋಟರಿ ಸುಳ್ಯದ ಧ್ವಜವನ್ನು ಯು ಎಸ್ ಎ, ಯು ಕೆ, ಸ್ವೀಡನ್, ಜರ್ಮನಿ, ಇಂಗ್ಲೆಂಡ್, ಪೋಲೆಂಡ್, ಬೆಲ್ಜಿಯಂ, ಸ್ವಿಟ್ಜರ್ಲ್ಯಾಂಡ್, ಆಸ್ಟ್ರಿಯಾ, ನಾರ್ವೆ, ಕೆನಡಾ, ನೆದೆರ್ಲ್ಯಾಂಡ್, ಡೆನ್ಮಾರ್ಕ್, ಮತ್ತು ಫ್ರಾನ್ಸ್ ಮುಂತಾದ 14 ದೇಶಗಳ ತಂಡದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು. ತದನಂತರ ವಿದೇಶಿ ರೋಟೇರಿಯನ್ನರ ತಂಡದ ಪರವಾಗಿ ಮಾರ್ಕೊಸ್ ಮತ್ತು ರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ರೊ.ಜೋಸೆಫ್ ಮ್ಯಾಥ್ಯು, ವಲಯ 5 ರ ಅಸಿಸ್ಟಂಟ್ ಗವರ್ನರ್ ಡಾ. ಕೇಶವ ಪಿ. ಕೆ., ರೋಟರಿ ಸಿಟಿಯ ಅಧ್ಯಕ್ಷ ಭಾನುಪ್ರಕಾಶ್, ಸಂಚಾಲಕ ಎನ್.ಎ‌. ಜಿತೇಂದ್ರ, ಕಾರ್ಯದರ್ಶಿ ಸನತ್, ಖಜಾಂಜಿ ಸತೀಶ್ ಕೆ.ಜಿ, ಗಣೇಶ್ ಆಳ್ವ, ಪ್ರಭಾಕರ ನಾಯರ್ , ಅವಿನಾಶ್ ಡಿ. ಕೆ ಹಾಗೂ ಶ್ರೀನಿವಾಸ್ ಕೆ ಉಪಸ್ಥಿತರಿದ್ದರು. ಬಳಿಕ ಮಡಿಕೇರಿ ಕಡೆಗೆ ವಿದೇಶಿ ರೋಟೆರಿಯನ್ನರ ತಂಡ ಪ್ರಯಾಣ ಬೆಳೆಸಿತು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ, 92 ವಿಧದ ಅಪಾಯಗಳಿವೆ
May 14, 2024
11:56 AM
by: The Rural Mirror ಸುದ್ದಿಜಾಲ
Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |
May 14, 2024
11:26 AM
by: ಸಾಯಿಶೇಖರ್ ಕರಿಕಳ
ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ? : ಸಾವಯವ ಕೃಷಿಯೇ ಕೃಷಿಗೆ ಆಧಾರ..
May 14, 2024
11:07 AM
by: The Rural Mirror ಸುದ್ದಿಜಾಲ
ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror