ಸುಳ್ಯ: ರೈಡ್ ಫಾರ್ ರೋಟರಿಯ 14 ದೇಶಗಳ 38 ವಿದೇಶಿ ರೋಟೇರಿಯನ್ನರ ತಂಡವು ಸುಳ್ಯ ರೋಟರಿ ಕ್ಲಬ್ ಗೆ ಭೇಟಿ ನೀಡಿ ವಿಚಾರ ವಿನಿಮಯ ನಡೆಸಿತು. ಸೇವೆಗಾಗಿ ನಿಧಿ ಸಂಗ್ರಹ ಈ ತಂಡದ ಭೇಟಿಯ ಪ್ರಮುಖ ಉದ್ದೇಶ. ಈ ತಂಡವು ಮಂಗಳೂರಿನಿಂದ ಹೊರಟು ಮಡಿಕೇರಿ, ಮೈಸೂರು, ಊಟಿ, ವಯನಾಡು, ಕೊಯಂಬುತ್ತೂರು, ಮೂನಾರ್, ಕೊಚ್ಚಿನ್ ನಲ್ಲಿ 29 ರಂದು ಸಮಾಪನಗೊಳ್ಳಲಿದೆ.
ರೋಟರಿ ಕ್ಲಬ್ ಸುಳ್ಯದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ರೊ .ಡಾ. ಪುರುಷೋತ್ತಮ ಕೆ.ಜಿ. ವಿದೇಶಿ ತಂಡದವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ರೋಟರಿ ಸುಳ್ಯದ ಧ್ವಜವನ್ನು ಯು ಎಸ್ ಎ, ಯು ಕೆ, ಸ್ವೀಡನ್, ಜರ್ಮನಿ, ಇಂಗ್ಲೆಂಡ್, ಪೋಲೆಂಡ್, ಬೆಲ್ಜಿಯಂ, ಸ್ವಿಟ್ಜರ್ಲ್ಯಾಂಡ್, ಆಸ್ಟ್ರಿಯಾ, ನಾರ್ವೆ, ಕೆನಡಾ, ನೆದೆರ್ಲ್ಯಾಂಡ್, ಡೆನ್ಮಾರ್ಕ್, ಮತ್ತು ಫ್ರಾನ್ಸ್ ಮುಂತಾದ 14 ದೇಶಗಳ ತಂಡದ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು. ತದನಂತರ ವಿದೇಶಿ ರೋಟೇರಿಯನ್ನರ ತಂಡದ ಪರವಾಗಿ ಮಾರ್ಕೊಸ್ ಮತ್ತು ರಾಜ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ರೊ.ಜೋಸೆಫ್ ಮ್ಯಾಥ್ಯು, ವಲಯ 5 ರ ಅಸಿಸ್ಟಂಟ್ ಗವರ್ನರ್ ಡಾ. ಕೇಶವ ಪಿ. ಕೆ., ರೋಟರಿ ಸಿಟಿಯ ಅಧ್ಯಕ್ಷ ಭಾನುಪ್ರಕಾಶ್, ಸಂಚಾಲಕ ಎನ್.ಎ. ಜಿತೇಂದ್ರ, ಕಾರ್ಯದರ್ಶಿ ಸನತ್, ಖಜಾಂಜಿ ಸತೀಶ್ ಕೆ.ಜಿ, ಗಣೇಶ್ ಆಳ್ವ, ಪ್ರಭಾಕರ ನಾಯರ್ , ಅವಿನಾಶ್ ಡಿ. ಕೆ ಹಾಗೂ ಶ್ರೀನಿವಾಸ್ ಕೆ ಉಪಸ್ಥಿತರಿದ್ದರು. ಬಳಿಕ ಮಡಿಕೇರಿ ಕಡೆಗೆ ವಿದೇಶಿ ರೋಟೆರಿಯನ್ನರ ತಂಡ ಪ್ರಯಾಣ ಬೆಳೆಸಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…