ಬಾಳಿಲ: ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಸ್ಮೃತಿ ದಿನಾಚರಣೆ ಹಾಗೂ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪೆರಡಾಲ ನವಜೀವನ ಪ್ರೌಢಶಾಲಾ ಶಿಕ್ಷಕಿ ಪ್ರಭಾವತಿ ಕೆದಿಲಾಯ ಉದ್ಘಾಟಿಸಿ ಕನ್ನಡ ಭಾಷೆಯ ಉಳಿಕೆಗಾಗಿ ಪ್ರಯತ್ನಿಸುವ ವಿಚಾರದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಶಾಲಾ ಸಂಸ್ಥಾಪಕ ದಿ|ವೆಂಕಟಸುಬ್ಬ ರಾವ್ ಕುರಿತು ಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ಧನುಷ್ ಸಂಸ್ಥಾಪಕರ ಕುರಿತು ಮಾತನಾಡಿದರು. ಬಳಿಕ ತಾಲೂಕು ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪ್ರೌಢಶಾಲಾ ವಿಭಾಗಕ್ಕೆ ಭಾವಗೀತೆ, ಆಶುಭಾಷಣ ಮತ್ತು ರಸಪ್ರಶ್ನೆ, ಪ್ರಥಮಿಕ ವಿಭಾಗ ವಿದ್ಯಾರ್ಥಿಗಳಿಗೆ ಹಾಡು, ಚಿತ್ರ ರಚನೆ ಸ್ಪರ್ಧೆಗಳು ನಡೆಯಿತು.
ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ಆತಿಥೇಯ ವಿದ್ಯಾಬೋಧಿನಿ ಪ್ರೌಢಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಎನ್.ವೆಂಕಟ್ರಮಣ ಭಟ್ ವಹಿಸಿದರು. ಪ್ರಭಾರ ಮುಖ್ಯ ಶಿಕ್ಷಕ ಯಶೋಧರ ನಾರಾಲು ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕ ವೆಂಕಟೇಶ್ಕುಮಾರ್ ವಂದಿಸಿದರು. ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…