ಬಾಳಿಲ: ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಸ್ಮೃತಿ ದಿನಾಚರಣೆ ಹಾಗೂ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪೆರಡಾಲ ನವಜೀವನ ಪ್ರೌಢಶಾಲಾ ಶಿಕ್ಷಕಿ ಪ್ರಭಾವತಿ ಕೆದಿಲಾಯ ಉದ್ಘಾಟಿಸಿ ಕನ್ನಡ ಭಾಷೆಯ ಉಳಿಕೆಗಾಗಿ ಪ್ರಯತ್ನಿಸುವ ವಿಚಾರದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಶಾಲಾ ಸಂಸ್ಥಾಪಕ ದಿ|ವೆಂಕಟಸುಬ್ಬ ರಾವ್ ಕುರಿತು ಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ಧನುಷ್ ಸಂಸ್ಥಾಪಕರ ಕುರಿತು ಮಾತನಾಡಿದರು. ಬಳಿಕ ತಾಲೂಕು ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪ್ರೌಢಶಾಲಾ ವಿಭಾಗಕ್ಕೆ ಭಾವಗೀತೆ, ಆಶುಭಾಷಣ ಮತ್ತು ರಸಪ್ರಶ್ನೆ, ಪ್ರಥಮಿಕ ವಿಭಾಗ ವಿದ್ಯಾರ್ಥಿಗಳಿಗೆ ಹಾಡು, ಚಿತ್ರ ರಚನೆ ಸ್ಪರ್ಧೆಗಳು ನಡೆಯಿತು.
ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ಆತಿಥೇಯ ವಿದ್ಯಾಬೋಧಿನಿ ಪ್ರೌಢಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಎನ್.ವೆಂಕಟ್ರಮಣ ಭಟ್ ವಹಿಸಿದರು. ಪ್ರಭಾರ ಮುಖ್ಯ ಶಿಕ್ಷಕ ಯಶೋಧರ ನಾರಾಲು ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕ ವೆಂಕಟೇಶ್ಕುಮಾರ್ ವಂದಿಸಿದರು. ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…