ಬಾಳಿಲ: ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಸ್ಮೃತಿ ದಿನಾಚರಣೆ ಹಾಗೂ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪೆರಡಾಲ ನವಜೀವನ ಪ್ರೌಢಶಾಲಾ ಶಿಕ್ಷಕಿ ಪ್ರಭಾವತಿ ಕೆದಿಲಾಯ ಉದ್ಘಾಟಿಸಿ ಕನ್ನಡ ಭಾಷೆಯ ಉಳಿಕೆಗಾಗಿ ಪ್ರಯತ್ನಿಸುವ ವಿಚಾರದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಶಾಲಾ ಸಂಸ್ಥಾಪಕ ದಿ|ವೆಂಕಟಸುಬ್ಬ ರಾವ್ ಕುರಿತು ಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ಧನುಷ್ ಸಂಸ್ಥಾಪಕರ ಕುರಿತು ಮಾತನಾಡಿದರು. ಬಳಿಕ ತಾಲೂಕು ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪ್ರೌಢಶಾಲಾ ವಿಭಾಗಕ್ಕೆ ಭಾವಗೀತೆ, ಆಶುಭಾಷಣ ಮತ್ತು ರಸಪ್ರಶ್ನೆ, ಪ್ರಥಮಿಕ ವಿಭಾಗ ವಿದ್ಯಾರ್ಥಿಗಳಿಗೆ ಹಾಡು, ಚಿತ್ರ ರಚನೆ ಸ್ಪರ್ಧೆಗಳು ನಡೆಯಿತು.
ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ಆತಿಥೇಯ ವಿದ್ಯಾಬೋಧಿನಿ ಪ್ರೌಢಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಎನ್.ವೆಂಕಟ್ರಮಣ ಭಟ್ ವಹಿಸಿದರು. ಪ್ರಭಾರ ಮುಖ್ಯ ಶಿಕ್ಷಕ ಯಶೋಧರ ನಾರಾಲು ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕ ವೆಂಕಟೇಶ್ಕುಮಾರ್ ವಂದಿಸಿದರು. ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…