Advertisement
ಸುದ್ದಿಗಳು

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿದ ಪರ್ವ

Share

ಸವಣೂರು: ತುಳುನಾಡಿನಲ್ಲಿ ಬಹಳಷ್ಟು ಹಬ್ಬಗಳು ಆಚರಣೆಯಲ್ಲಿದ್ದು ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ ಆಚರಿಸುವ ಹಬ್ಬಗಳಾಗಿವೆ. ಈ ಎಲ್ಲಾ ಹಬ್ಬಗಳು ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದ್ದು ಭೂತಾರಾಧನೆ, ನಾಗಾರಾಧನೆ ಅವುಗಳಲ್ಲಿ ಪ್ರಮುಖವಾದವುಗಳಾಗಿವೆ.ಹೀಗೆ ಆಟಿ ತಿಂಗಳಿಗೂ ತನ್ನದೇ ಆದ ಮಹತ್ವವಿದೆ.ಆಟಿ ತಿಂಗಳ ಒಂದೊಂದು ಆಹಾರ ಸೇವನೆಯ ಹಿಂದೆ ವೈಜ್ಞಾನಿಕ ಮಹತ್ವ ಇದೆ ಎಂದು ನಿಂತಿಕಲ್ಲು ಕೆ.ಎಸ್.ಗೌಡ ವಿದ್ಯಾಸಂಸ್ಥೆ ಯ ಶಿಕ್ಷಕ ಅಜಿತ್ ಗೌಡ ಐವರ್ನಾಡು ಹೇಳಿದರು.

ಅವರು  ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಆಟಿದ ಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು , ಆಟಿ ತಿಂಗಳು ಎಂದರೆ ಹಿಂದಿನ ದಿನಗಳಲ್ಲಿ ಬಹಳ ಕಷ್ಟದ ದಿನಗಳು, ಆ ದಿನಗಳಲ್ಲಿ ಹೊಟ್ಟೆಗಿಲ್ಲದೆ ಸೇವಿಸಿದ ಆಹಾರವು ಇಂದಿನ ದಿನಗಳಲ್ಲಿ ಔಷಧೀಯ ಗುಣವಿರುವ ಆಹಾರವಾಗಿದ್ದು, ಆಟಿಯ ಎಲ್ಲ ಆಚಾರಗಳಲ್ಲೂ ವೈಜ್ಞಾನಿಕ ಸತ್ಯ ಅಡಗಿದೆ ಎಂದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ,ಆಟಿ ಎನ್ನುವಂತದ್ದು ಉತ್ಸವವಲ್ಲ, ಅದೊಂದು ಆಚರಣೆ. ಆಟಿ ತಿಂಗಳು ಕಷ್ಟದ ಸಮಯವಾಗಿದ್ದು ಅದು ನಮ್ಮನ್ನು ಮಾನಸಿಕವಾಗಿ,ದೈಹಿಕವಾಗಿ ಗಟ್ಟಿಗೊಳಿಸುವ ವಿಚಾರವನ್ನು ಹೊಂದಿದೆ. ಇತಿಹಾಸವನ್ನು ಮರೆತವರು ಇತಿಹಾಸವನ್ನು ನಿರ್ಮಿಸಲಾರರು ಎಂದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಮಾತನಾಡಿ, ತುಳುನಾಡಿಗೆ ಅದರದೇ ಆದ ಇತಿಹಾಸವಿದ್ದು ಇಲ್ಲಿನ ಆಚರಣೆ, ಸಂಸ್ಕೃತಿಗಳನ್ನು ಅರ್ಥೈಸಿಕೊಂಡು ತಮ್ಮದಾಗಿಸಿಕೊಂಡಲ್ಲಿ ನಮ್ಮ ಜೀವನವು ಸುಖಕರವಾಗಿರುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್.ರೈ, ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿ„ರೈ,ಜತೆಕಾರ್ಯದರ್ಶಿ ಕು. ಮಲ್ಲಿಕಾ ಕೆ. ಎಸ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಮನೋಜ್ ಸ್ವಾಗತಿಸಿ, ಧನ್ಯಶ್ರೀ ವಂದಿಸಿದರು. ಧನುಶ್ರೀ ಅವರು ಡೆನ್ನನ ಡೆನ್ನಾನ ಹಾಡು ಹಾಡಿದರು.ಶ್ರಾವ್ಯ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

2 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

11 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

17 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

17 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

17 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

17 hours ago