Advertisement
ಸುದ್ದಿಗಳು

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿದ ಪರ್ವ

Share

ಸವಣೂರು: ತುಳುನಾಡಿನಲ್ಲಿ ಬಹಳಷ್ಟು ಹಬ್ಬಗಳು ಆಚರಣೆಯಲ್ಲಿದ್ದು ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ ಆಚರಿಸುವ ಹಬ್ಬಗಳಾಗಿವೆ. ಈ ಎಲ್ಲಾ ಹಬ್ಬಗಳು ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದ್ದು ಭೂತಾರಾಧನೆ, ನಾಗಾರಾಧನೆ ಅವುಗಳಲ್ಲಿ ಪ್ರಮುಖವಾದವುಗಳಾಗಿವೆ.ಹೀಗೆ ಆಟಿ ತಿಂಗಳಿಗೂ ತನ್ನದೇ ಆದ ಮಹತ್ವವಿದೆ.ಆಟಿ ತಿಂಗಳ ಒಂದೊಂದು ಆಹಾರ ಸೇವನೆಯ ಹಿಂದೆ ವೈಜ್ಞಾನಿಕ ಮಹತ್ವ ಇದೆ ಎಂದು ನಿಂತಿಕಲ್ಲು ಕೆ.ಎಸ್.ಗೌಡ ವಿದ್ಯಾಸಂಸ್ಥೆ ಯ ಶಿಕ್ಷಕ ಅಜಿತ್ ಗೌಡ ಐವರ್ನಾಡು ಹೇಳಿದರು.

ಅವರು  ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಆಟಿದ ಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು , ಆಟಿ ತಿಂಗಳು ಎಂದರೆ ಹಿಂದಿನ ದಿನಗಳಲ್ಲಿ ಬಹಳ ಕಷ್ಟದ ದಿನಗಳು, ಆ ದಿನಗಳಲ್ಲಿ ಹೊಟ್ಟೆಗಿಲ್ಲದೆ ಸೇವಿಸಿದ ಆಹಾರವು ಇಂದಿನ ದಿನಗಳಲ್ಲಿ ಔಷಧೀಯ ಗುಣವಿರುವ ಆಹಾರವಾಗಿದ್ದು, ಆಟಿಯ ಎಲ್ಲ ಆಚಾರಗಳಲ್ಲೂ ವೈಜ್ಞಾನಿಕ ಸತ್ಯ ಅಡಗಿದೆ ಎಂದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ,ಆಟಿ ಎನ್ನುವಂತದ್ದು ಉತ್ಸವವಲ್ಲ, ಅದೊಂದು ಆಚರಣೆ. ಆಟಿ ತಿಂಗಳು ಕಷ್ಟದ ಸಮಯವಾಗಿದ್ದು ಅದು ನಮ್ಮನ್ನು ಮಾನಸಿಕವಾಗಿ,ದೈಹಿಕವಾಗಿ ಗಟ್ಟಿಗೊಳಿಸುವ ವಿಚಾರವನ್ನು ಹೊಂದಿದೆ. ಇತಿಹಾಸವನ್ನು ಮರೆತವರು ಇತಿಹಾಸವನ್ನು ನಿರ್ಮಿಸಲಾರರು ಎಂದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಮಾತನಾಡಿ, ತುಳುನಾಡಿಗೆ ಅದರದೇ ಆದ ಇತಿಹಾಸವಿದ್ದು ಇಲ್ಲಿನ ಆಚರಣೆ, ಸಂಸ್ಕೃತಿಗಳನ್ನು ಅರ್ಥೈಸಿಕೊಂಡು ತಮ್ಮದಾಗಿಸಿಕೊಂಡಲ್ಲಿ ನಮ್ಮ ಜೀವನವು ಸುಖಕರವಾಗಿರುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್.ರೈ, ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿ„ರೈ,ಜತೆಕಾರ್ಯದರ್ಶಿ ಕು. ಮಲ್ಲಿಕಾ ಕೆ. ಎಸ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಮನೋಜ್ ಸ್ವಾಗತಿಸಿ, ಧನ್ಯಶ್ರೀ ವಂದಿಸಿದರು. ಧನುಶ್ರೀ ಅವರು ಡೆನ್ನನ ಡೆನ್ನಾನ ಹಾಡು ಹಾಡಿದರು.ಶ್ರಾವ್ಯ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

11 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

12 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

13 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

22 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago