ವಿದ್ಯಾರ್ಥಿಗಳನ್ನು ತಿದ್ದಲು ಶಿಕ್ಷೆಯೊಂದೇ ಮಾರ್ಗವಲ್ಲ

September 11, 2019
12:35 PM

ನಾಲಂದ: ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿದ ನಿವೃತ್ತ ಶಿಕ್ಷಕ ನಾರಾಯಣ ಭಟ್ ಬನಾರಿ ವಿದ್ಯಾರ್ಥಿಗಳನ್ನು ತಿದ್ದಿ ಸರಿ ದಾರಿಗೆ ತರಲು ಶಿಕ್ಷೆಯೊಂದೇ ಮಾರ್ಗವಲ್ಲ. ಅಧ್ಯಾಪಕ ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಿಂದಲೂ ಹೆಚ್ಚು ಪ್ರೀತಿಸಬೇಕು. ತಾನು ಮಾಡುವ ಪುಣ್ಯ ಕಾರ್ಯದಲ್ಲಿ ಸಂಪೂರ್ಣ ತೃಪ್ತಿ, ಪ್ರೀತಿ, ತಾಳ್ಮೆ ಇರಬೇಕು ಎಂದು ಹೇಳಿದರು.

ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಮ್ಮ ಜೀವನವನ್ನು ರೂಪಿಸಲು ಹಲವಾರು ಅವಕಾಶಗಳಿದೆ. ಕೆಲಸದಲ್ಲಿ ತಾರತಮ್ಯವಿಲ್ಲ. ಕೆಲಸ ಸಣ್ಣದಾದರೂ, ದೊಡ್ಡದಾದರೂ, ತೃಪ್ತಿ, ನಿಷ್ಠೆ, ಶ್ರದ್ಧೆ ಇದ್ದಲ್ಲಿ ಅದೇ ಪರಮಾನಂದ . ಸಣ್ಣ ಮಗುವಿನಿಂದಲೂ ಕೂಡ ಹಲವಾರು ವಿಚಾರಗಳನ್ನು ತಿಳಿಯಲು ಸಾಧ್ಯ. ಆದುದರಿಂದ ಜೀವನವೇ ಮೊದಲ ಪಾಠಶಾಲೆ ಎಂದರು.

28 ವರ್ಷಗಳ ಕಾಲ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾರಾಯಣ ಭಟ್ ಬನಾರಿ ಹಾಗೂ ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರಾಮ ನಾಯ್ಕ ಅವರನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಹಾಗೂ ಪ್ರಾಂಶುಪಾಲರಾದ ಡಾ. ವಿಘ್ನೇಶ್ವರ ವರ್ಮುಡಿ ಸನ್ಮಾನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಮಾತನಾಡಿ, ಅಜ್ಞಾನದಿಂದ ಕುರುಡನಾಗಿದ್ದವನನ್ನು ಜ್ಞಾನದ ಬೆಳಕು ಹಾಯಿಸಿ ಕಣ್ಣು ತೆರೆಸಿದ ಅಧ್ಯಾಪಕರನ್ನು ವಿದ್ಯಾರ್ಥಿಗಳು ಎಂದೆಂದಿಗೂ ಮರೆಯಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ. ಎಂ ಸ್ವಾಗತಿಸಿದರು. ಅಶ್ವಿನಿ ಕ್ರಾಸ್ತ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror