Advertisement
ಸುದ್ದಿಗಳು

ವಿದ್ಯಾರ್ಥಿಗಳನ್ನು ತಿದ್ದಲು ಶಿಕ್ಷೆಯೊಂದೇ ಮಾರ್ಗವಲ್ಲ

Share

ನಾಲಂದ: ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿದ ನಿವೃತ್ತ ಶಿಕ್ಷಕ ನಾರಾಯಣ ಭಟ್ ಬನಾರಿ ವಿದ್ಯಾರ್ಥಿಗಳನ್ನು ತಿದ್ದಿ ಸರಿ ದಾರಿಗೆ ತರಲು ಶಿಕ್ಷೆಯೊಂದೇ ಮಾರ್ಗವಲ್ಲ. ಅಧ್ಯಾಪಕ ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಿಂದಲೂ ಹೆಚ್ಚು ಪ್ರೀತಿಸಬೇಕು. ತಾನು ಮಾಡುವ ಪುಣ್ಯ ಕಾರ್ಯದಲ್ಲಿ ಸಂಪೂರ್ಣ ತೃಪ್ತಿ, ಪ್ರೀತಿ, ತಾಳ್ಮೆ ಇರಬೇಕು ಎಂದು ಹೇಳಿದರು.

ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಮ್ಮ ಜೀವನವನ್ನು ರೂಪಿಸಲು ಹಲವಾರು ಅವಕಾಶಗಳಿದೆ. ಕೆಲಸದಲ್ಲಿ ತಾರತಮ್ಯವಿಲ್ಲ. ಕೆಲಸ ಸಣ್ಣದಾದರೂ, ದೊಡ್ಡದಾದರೂ, ತೃಪ್ತಿ, ನಿಷ್ಠೆ, ಶ್ರದ್ಧೆ ಇದ್ದಲ್ಲಿ ಅದೇ ಪರಮಾನಂದ . ಸಣ್ಣ ಮಗುವಿನಿಂದಲೂ ಕೂಡ ಹಲವಾರು ವಿಚಾರಗಳನ್ನು ತಿಳಿಯಲು ಸಾಧ್ಯ. ಆದುದರಿಂದ ಜೀವನವೇ ಮೊದಲ ಪಾಠಶಾಲೆ ಎಂದರು.

28 ವರ್ಷಗಳ ಕಾಲ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾರಾಯಣ ಭಟ್ ಬನಾರಿ ಹಾಗೂ ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರಾಮ ನಾಯ್ಕ ಅವರನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಹಾಗೂ ಪ್ರಾಂಶುಪಾಲರಾದ ಡಾ. ವಿಘ್ನೇಶ್ವರ ವರ್ಮುಡಿ ಸನ್ಮಾನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಮಾತನಾಡಿ, ಅಜ್ಞಾನದಿಂದ ಕುರುಡನಾಗಿದ್ದವನನ್ನು ಜ್ಞಾನದ ಬೆಳಕು ಹಾಯಿಸಿ ಕಣ್ಣು ತೆರೆಸಿದ ಅಧ್ಯಾಪಕರನ್ನು ವಿದ್ಯಾರ್ಥಿಗಳು ಎಂದೆಂದಿಗೂ ಮರೆಯಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ. ಎಂ ಸ್ವಾಗತಿಸಿದರು. ಅಶ್ವಿನಿ ಕ್ರಾಸ್ತ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago