ನಾಲಂದ: ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿದ ನಿವೃತ್ತ ಶಿಕ್ಷಕ ನಾರಾಯಣ ಭಟ್ ಬನಾರಿ ವಿದ್ಯಾರ್ಥಿಗಳನ್ನು ತಿದ್ದಿ ಸರಿ ದಾರಿಗೆ ತರಲು ಶಿಕ್ಷೆಯೊಂದೇ ಮಾರ್ಗವಲ್ಲ. ಅಧ್ಯಾಪಕ ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಿಂದಲೂ ಹೆಚ್ಚು ಪ್ರೀತಿಸಬೇಕು. ತಾನು ಮಾಡುವ ಪುಣ್ಯ ಕಾರ್ಯದಲ್ಲಿ ಸಂಪೂರ್ಣ ತೃಪ್ತಿ, ಪ್ರೀತಿ, ತಾಳ್ಮೆ ಇರಬೇಕು ಎಂದು ಹೇಳಿದರು.
ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಮ್ಮ ಜೀವನವನ್ನು ರೂಪಿಸಲು ಹಲವಾರು ಅವಕಾಶಗಳಿದೆ. ಕೆಲಸದಲ್ಲಿ ತಾರತಮ್ಯವಿಲ್ಲ. ಕೆಲಸ ಸಣ್ಣದಾದರೂ, ದೊಡ್ಡದಾದರೂ, ತೃಪ್ತಿ, ನಿಷ್ಠೆ, ಶ್ರದ್ಧೆ ಇದ್ದಲ್ಲಿ ಅದೇ ಪರಮಾನಂದ . ಸಣ್ಣ ಮಗುವಿನಿಂದಲೂ ಕೂಡ ಹಲವಾರು ವಿಚಾರಗಳನ್ನು ತಿಳಿಯಲು ಸಾಧ್ಯ. ಆದುದರಿಂದ ಜೀವನವೇ ಮೊದಲ ಪಾಠಶಾಲೆ ಎಂದರು.
28 ವರ್ಷಗಳ ಕಾಲ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾರಾಯಣ ಭಟ್ ಬನಾರಿ ಹಾಗೂ ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರಾಮ ನಾಯ್ಕ ಅವರನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಹಾಗೂ ಪ್ರಾಂಶುಪಾಲರಾದ ಡಾ. ವಿಘ್ನೇಶ್ವರ ವರ್ಮುಡಿ ಸನ್ಮಾನಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಮಾತನಾಡಿ, ಅಜ್ಞಾನದಿಂದ ಕುರುಡನಾಗಿದ್ದವನನ್ನು ಜ್ಞಾನದ ಬೆಳಕು ಹಾಯಿಸಿ ಕಣ್ಣು ತೆರೆಸಿದ ಅಧ್ಯಾಪಕರನ್ನು ವಿದ್ಯಾರ್ಥಿಗಳು ಎಂದೆಂದಿಗೂ ಮರೆಯಬಾರದು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ. ಎಂ ಸ್ವಾಗತಿಸಿದರು. ಅಶ್ವಿನಿ ಕ್ರಾಸ್ತ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತ ನಿರೂಪಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…